Advertisement

ನ.2 ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಿಡಿಒಗಳ ಧರಣಿ

11:58 AM Oct 30, 2022 | Team Udayavani |

ಗುಂಡ್ಲುಪೇಟೆ: ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವಿವಿಧ ಬೇಡಿಕೆ ಒತ್ತಾಯಿಸಿ ನ.2ರಂದು ಬೆಂಗಳೂರಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಜಿಪಂ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಿಲ್ಲೆಯ ಎಲ್ಲಾ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸುತ್ತಿದ್ದು ಹೋರಾಟ ನಿಲ್ಲುವ ತನಕ ಕುಡಿವ ನೀರು ಮತ್ತು ಬೀದಿ ದೀಪ ಸೇವೆಗಳು ಮಾತ್ರ ಸಿಗಲಿವೆ. ಇನ್ನೂಳಿದ ಎಲ್ಲಾ ಸೇವೆ ಸ್ಥಗಿತಗೊಳ್ಳಲಿರುವ ಕಾರಣ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ‌

ಗ್ರಾಮೀಣ ಭಾಗದ ಶೇ.70ರ ಭಾಗ ಜನತೆಗೆ ಮೂಲಭೂತ ಸೌಕರ್ಯಗಳ ನೀಡುವ ಜೊತೆಗೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆ ಅನುಷ್ಠಾನ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರಕ್ಕೆ ಹತ್ತು ಹಲವು ಪ್ರಶಸ್ತಿ ಪಡೆದುಕೊಳ್ಳುವಲ್ಲಿ ಪಿಡಿಒಗಳ ಪಾತ್ರ ಪ್ರಮುಖವಾಗಿದೆ ಎಂದರು.

ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ 11 ಬೇಡಿಕೆ ಈಡೇರಿಸಬೇಕು ಎಂದು ನಮ್ಮಗಳ ನ್ಯಾಯಯುತ ಬೇಡಿಕೆಗಾಗಿ, ಫ್ರೀಡಂ ಪಾರ್ಕ್‌ ಬೆಂಗಳೂರು ಚಲೋ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಜಿಲ್ಲೆಯ ಪಿಡಿಒಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next