Advertisement

ಸೇನೆ ವಿರುದ್ಧ ಕೇಸು ಪಿಡಿಪಿ-ಬಿಜೆಪಿ ಮುನಿಸು

10:07 AM Jan 30, 2018 | |

ಶ್ರೀನಗರ: ಶೋಪಿಯಾನ್‌ನಲ್ಲಿ ಸೇನೆ ಗುಂಡು ಹಾರಿಸಿದ್ದಕ್ಕೆ ಪ್ರತಿಯಾಗಿ ಎಫ್ಐಆರ್‌ ದಾಖಲಿಸಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿರುವ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರದಲ್ಲಿ ಅತೃಪ್ತಿಯ ಹೊಗೆ ತಂದಿಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕ ಕೂಡಲೇ ಸೇನಾ ಘಟಕದ ವಿರುದ್ಧ ದಾಖಲಾಗಿರುವ ಎಫ್ಐಆರ್‌ ಹಿಂಪಡೆಯಬೇಕೆಂದು ಒತ್ತಾಯಿಸಿದರೆ, ಸರ್ಕಾರದ ಕ್ರಮವನ್ನು ಸಮರ್ಥಿಸಿರುವ ಸಿಎಂ ಮೆಹಬೂಬಾ ಮುಫ್ತಿ ಘಟನೆಯ ಬಗ್ಗೆ ಆಮೂಲಾಗ್ರ ತನಿಖೆಯಾಗಬೇಕು ಎಂದಿದ್ದಾರೆ.  ವಿಧಾನಸಭೆಯಲ್ಲಿ ಮಾತನಾಡಿದ ಅವರು, ಶೋಪಿಯಾನ್‌ನಲ್ಲಿ ಸೇನೆ ಗುಂಡು ಹಾರಿಸಿದ್ದರಿಂದ ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಹಿನ್ನಡೆಯಾಗಲಿದೆ. ಈ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಜತೆ ಚರ್ಚಿಸಿದ್ದಾಗಿ ಹೇಳಿದ್ದಾರೆ.  

Advertisement
Advertisement

Udayavani is now on Telegram. Click here to join our channel and stay updated with the latest news.

Next