Advertisement

“ಮದ್ಯವರ್ಜನದಿಂದ ಶಾಂತಿ, ಸಮೃದ್ಧಿ ನೆಲೆಗೊಳ್ಳುವುದು’

11:21 PM Sep 14, 2019 | Sriram |

ಕಾರ್ಕಳ : ಮದ್ಯವರ್ಜನದಿಂದ ಮನೆಮನಗಳಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಗೊಳ್ಳುವುದು ಎಂದು ಎಸ್‌ಕೆಡಿಆರ್‌ಡಿಪಿ ಉಡುಪಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಹೇಳಿದರು.

Advertisement

ಸೆ. 13ರಂದು ಕಾರ್ಕಳದಲ್ಲಿ ನಡೆ ಯುತ್ತಿರುವ ಮದ್ಯವರ್ಜನ ಶಿಬಿರದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೇತೃತ್ವದಲ್ಲಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡ ಲಕ್ಷಾಂತರ ಮಂದಿ ಕುಡಿತ ಬಿಟ್ಟು ನವ ಜೀವನ ಪ್ರಾರಂಭಿಸಿದ್ದು, ಅವರೆಲ್ಲರ ಕುಟುಂಬಗಳಲ್ಲಿ ಶಾಂತಿ ನೆಲೆಸಿ, ಸಮೃದ್ಧಿ ತುಂಬಿದೆ ಎಂದರು.

ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಹಾಸ ಸುವರ್ಣ, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ಗಣೇಶ್‌ ಬಿ., ಯೋಜನಾಧಿಕಾರಿ ಭಾಸ್ಕರ್‌ ವಿ. ಉಪಸ್ಥಿತರಿದ್ದರು. ಪ್ರಸಾದ್‌ ಸ್ವಾಗತಿಸಿ, ನಿರೂಪಿಸಿದರು. ವಾರಿಜಾ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next