Advertisement

370 ವಿಧಿ ರದ್ದು: ಶಾಂತಿಯಿಂದಿದೆ ಕಾಶ್ಮೀರ

09:54 AM Aug 07, 2019 | keerthan |

ಶ್ರೀನಗರ/ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರವನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೋರ್ವರು ತಿಳಿಸಿದ್ದಾರೆ.

Advertisement

ಟಿವಿ ಮಾಧ್ಯಮವೊಂದರ ಜೊತೆ ಮಾತನಾಡಿದ ಪೊಲೀಸ್ ಅಧಿಕಾರಿ ಸಂವಿಧಾನದ 370ನೇ ವಿಧಿ ಮತ್ತು 35ಎ ಪರಿಚ್ಛೇಧದಲ್ಲಿರುವ ವಿಶೇಷ ಸ್ಥಾನಮಾನ ಅಂಶಗಳನ್ನು ರದ್ದು ಮಾಡಿದ ನಂತರ ರಾಜ್ಯದಲ್ಲಿ ಜನರು ಶಾಂತಿಯಿಂದಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರ, ರಾಜ್ಯ ಸ್ಥಾನಮಾನ ರದ್ದತಿ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ರಚನೆ ಮಾಡಿ ಕೇಂದ್ರ ಸರಕಾರ ಸೋಮವಾರ ಐತಿಹಾಸಿಕ ನಿರ್ಣಯ ಕೈಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next