Advertisement

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

07:27 PM May 16, 2024 | Team Udayavani |

ಬಂಟ್ವಾಳ: ಕಲ್ಲಡ್ಕ-ವಿಟ್ಲ ರಸ್ತೆಯ ಕುಂಟಿಪಾಪುನಲ್ಲಿ ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಗಾಯಗೊಂಡ ಘಟನೆ ಮೇ 15ರ ರಾತ್ರಿ ನಡೆದಿದೆ.

Advertisement

ಘಟನೆಯಲ್ಲಿ ಗೋಳ್ತಮಜಲು ನಿವಾಸಿ ಇಸ್ಮಾಯಿಲ್‌ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಅವರು ರಾತ್ರಿ ವೇಳೆ ಮನೆಗೆ ತೆರಳುತ್ತಿದ್ದ ವೇಳೆಗೆ ಚಾಲಕ ಇಬ್ರಾಹಿಂ ಅವರು ಕಾರನ್ನು ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next