Advertisement

ಪಾದಚಾರಿ ಅಡ್ಡಗಟ್ಟಿ, ಬೆದರಿಸಿ 5 ಸಾವಿರ ರೂ. ಸುಲಿಗೆ: ಕೇಸ್‌

10:35 AM Mar 05, 2024 | Team Udayavani |

ಬೆಂಗಳೂರು: ಪಾದಚಾರಿಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಆನ್‌ಲೈನ್‌ ಮೂಲಕ 5 ಸಾವಿರ ರೂ. ವರ್ಗಾಯಿಸಿಕೊಂಡು ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಕೆ.ಆರ್‌.ಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮಾರತ್ತಹಳ್ಳಿ ನಿವಾಸಿ ಚಿಣ್ಣಪೀರಯ್ಯ ಸುಲಿಗೆಗೊಳಗಾದವರು. ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಕೆ.ಆರ್‌.ಪುರದ ಬನಶಂಕರಿ ಲೇಔಟ್‌ ರಸ್ತೆಯಲ್ಲಿ ಸೋಮವಾರ ಮುಂಜಾನೆ 3.30ರ ಸುಮಾರಿಗೆ ಚಿಣ್ಣಪೀರಯ್ಯ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂದಿನಿಂದ ಬಂದ ಇಬ್ಬರು ದುಷ್ಕರ್ಮಿಗಳು, ಚಿಣ್ಣಪೀರಯ್ಯನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಇಲ್ಲ ಎಂದಾಗ, ಮೊಬೈಲ್‌ನಲ್ಲಿ ಯುಪಿಐ ಮೂಲಕ 5 ಸಾವಿರ ರೂ. ವರ್ಗಾಯಿಸಿಕೊಂಡು ಪರಾರಿಯಾಗಿರುವುದಾಗಿ ಚಿಣ್ಣಪೀರಯ್ಯ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದರು. ಕೆ.ಆರ್‌.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next