Advertisement

ಪೇಜಾವರ ಶ್ರೀ ಮಠಕ್ಕೆ: ಬಿಗು ಭದ್ರತೆ- ಭೇಟಿಗಿಲ್ಲ ಅವಕಾಶ

09:57 AM Dec 30, 2019 | keerthan |

ಉಡುಪಿ: ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಉಡುಪಿ ಪೇಜಾವರ ಮಠಕ್ಕೆ ಕರೆತರಲಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿದಿದೆ.

Advertisement

ಪೇಜಾವರ ಮಠ, ಉಡುಪಿಯಲ್ಲಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸುಮಾರು 700 ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ.

ಪಲಿಮಾರು ಶ್ರೀ, ಕಿರಿಯ ಶ್ರೀ, ರಾಮಚಂದ್ರ ಮಠದ ರಾಫವೇಂದ್ರ ಶ್ರೀ, ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ, ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ರಘುಪತಿ ಭಟ್ ಮಠದಲ್ಲಿದ್ದು ಪ್ರತಿಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.

ಭೇಟಿಗೆ ಅವಕಾಶವಿಲ್ಲ

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸುತ್ತಿರುವ ಕಾರಣ ಮಠದಲ್ಲಿಯೇ ವೆಂಟಿಲೇಟರ್ ಸಹಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಯಾರಿಗೂ ಶ್ರೀಗಳ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ. ಮಠದ ಸುತ್ತಮುತ್ತ ಬಿಗುಭದ್ರತೆ ಒದಗಿಸಲಾಗಿದ್ದು, ಯಾರಿಗೂ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next