Advertisement

ಆರೋಗ್ಯಕ್ಕಾಗಿ ಸೈಕ್ಲಿಂಗ್ “ಜಾಥಾ : ಸ್ವತಃ ಸೈಕಲ್ ಸವಾರಿ ಮಾಡಿದ ಪೇಜಾವರ ಶ್ರೀ

03:48 PM Feb 27, 2022 | Team Udayavani |

ಮಣಿಪಾಲ: ನಮ್ಮ ಶರೀರದ ಮತ್ತು ಮನಸ್ಸಿನ ಸ್ವಾಸ್ಯ ಉತ್ತಮವಾಗಿದ್ದರೆ ಮಾತ್ರ ಸದ್ರಡ ಜೀವನ ಸಾಗಿಸಲು ಸಾಧ್ಯ ಈ ನಿಟ್ಟಿನಲ್ಲಿ ಸೈಕ್ಲಿಂಗ್ ನಂತಹ ಚಿಟುವಟಿಕೆಗಳು ಪೂರಕವಾಗಿದೆ ಎಂದು ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀಥ೯ ಶ್ರೀಪಾದರು ಆಶೀವ೯ಚನ ನೀಡಿದರು.

Advertisement

ಅವರು ಫೆ.27 ರಂದು ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಕೆನರಾ ಬ್ಯಾಂಕ್ ವೃತ್ತ ಕಚೇರಿ ಮತ್ತು ವಸಂತಿ ಎ ಪೈ ಪ್ರತಿಷ್ಟಾನ ಮಣಿಪಾಲ ಇದರ ಆಶ್ರಯದಲ್ಲಿ ನಡೆದ “ಆರೋಗ್ಯಕ್ಕಾಗಿ ಸೈಕ್ಲಿಂಗ್ “ಜಾಥಾವನ್ನು ಸ್ವತಃ ಸೈಕಲ್ ಸವಾರಿ ಮತ್ತು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದರು.

ಮಣಿಪಾಲದಿಂದ ಮಲ್ಪೆ ಸೀ ವಾಕ್ ವರೆಗೆ ನಡೆದ ಈ ಜಾಥಾದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಮಲ್ಪೆ ಬೀಚ್ ನಲ್ಲಿ ಆರೋಗ್ಯ ಮತ್ತು ಫಿಟ್ ಇಂಡಿಯಾ ಕುರಿತು ಕ್ವಿಝ್ ನಡೆಯಿತು.
ಶ್ರೀ ಪಾದರ ಸೈಕಲ್ ಸವಾರಿ ಎಲ್ಲರನ್ನು ಬೆರಗುಗೊಳಿಸಿತು.

ಇದನ್ನೂ ಓದಿ : ಬಿಜೆಪಿ ಆಡಳಿತವಿರುವಲ್ಲಿ ಆದಾಯ ಮತ್ತು ತೆರಿಗೆ ಇಲ್ಲ: ಸಂಜಯ್ ರಾವುತ್ ಕಿಡಿ

ಈ ಸಂದಭ೯ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ನಾಗಭೂಷಣ್ ಉಡುಪ, ಕೆನರಾ ಬ್ಯಾಂಕ್ ಡಿಜಿಎಂ ಪದ್ಮಾವತಿ, ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ| ರಾಮಚಂದ್ರ ಕಾಮತ್, ಸಹ ಸಂಚಾಲಕ ಡಾ| ವಿದ್ಯಾಧರ ಶೆಟ್ಟಿ, ರಾಜ್ಯ ಕಾ.ಸದಸ್ಯ ಡಾ| ವಿಜಯಿಂದ್ರ ವಸಂತ್, ಸೆಲ್ಕೋ ಸೋಲಾರ್ ಡಿಜಿಎಂ ಜಗದೀಶ್ ಪೈ, ಡಾ| ರವೀಂದ್ರ ಕುಂದಾಪುರ, ವಿಶಾಲ್ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.

Advertisement

ಮೇ.ರಾಧಾಕೃಷ್ಣ ಕಾಯ೯ಕ್ರಮ ನಿರೂಪಿಸಿದರು.ರಾಘವೇಂದ್ರ ಪ್ರಭು,ಕವಾ೯ಲು ವಂದಿಸಿದರು.

ಭಾಗವಹಿಸಿದವರಿಗೆ ಟಿ, ಶಟ್೯ ಮತ್ತು ಪ್ರಮಾಣ ಪತ್ರ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next