Advertisement

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

09:06 PM May 09, 2024 | Team Udayavani |

ಗದಗ: ಪೆನ್‌ಡ್ರೈವ್‌ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯಗಳನ್ನು ವಿಚಾರಣೆ ದಿನಗಳಂದು ಯುವಜನ ಮತ್ತು ಕ್ರೀಡಾ ಇಲಾಖೆಯ ಗುರುನಾನಕ ಭವನಕ್ಕೆ ಸ್ಥಳಾಂತರಿಸಲು ಹೈಕೋರ್ಟ್‌ ರಿಜಿಸ್ಟ್ರಾರ್‌ಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂ ಧಿಸಿದಂತೆ ಈಗಾಗಲೇ ಎಸ್‌ಐಟಿ ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ. ಕೋವಿಡ್‌ ಕಾಲದಲ್ಲಿ ಕ್ರಿಮಿನಲ್‌ ಪ್ರಕರಣ ಸೇರಿ ವಿವಿಧ ಪ್ರಕರಣಗಳ ಪ್ರತ್ಯೇಕ ವಿಚಾರಣೆ ನಡೆಸಿದ ಮಾದರಿಯಲ್ಲೇ ಪೆನ್‌ಡ್ರೈವ್‌ ಪ್ರಕರಣಗಳ ವಿಚಾರಣೆಯನ್ನು ಅದೇ ಗುರುನಾನಕ್‌ ಭವನದಲ್ಲಿ ನಡೆಸುವ ಸಲುವಾಗಿ ಪ್ರಕರಣಗಳ ವಿಚಾರಣೆ ದಿನಗಳಂದು ಮಾತ್ರ ಸೀಮಿತವಾಗಿ 42ನೇ ಎಸಿಎಂಎಂ ನ್ಯಾಯಾಲಯ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಿವಿಲ್‌ ಕೋರ್ಟ್‌ ಆ್ಯಂಡ್‌ ಸೆಷನ್‌ ಜಡ್ಜ್ ನ್ಯಾಯಾಲಯಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವಂತೆ ಪತ್ರ ಬರೆಯಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next