Advertisement

ಕಾಮಗಾರಿಗಳನ್ನು ಶೀಘ್ರ ನಡೆಸಲು ಶಾಸಕರ ಸೂಚನೆ

04:23 PM May 06, 2020 | Team Udayavani |

ಕಾರ್ಕಳ: ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಟೆಂಡರ್‌ ಪ್ರಕ್ರಿಯೆಯಾದ ರಸ್ತೆ ಹಾಗೂ ಇನ್ನಿತರ ಕಾಮಗಾರಿಗಳನ್ನು ತತ್‌ಕ್ಷಣ ಆರಂಭಿಸಿ ಮಳೆಗಾಲದ ಒಳಗೆ ಪೂರ್ಣಗೊಳಿಸುವಂತೆ ಶಾಸಕ ವಿ. ಸುನಿಲ್‌ ಕುಮಾರ್‌ ವಿವಿಧ ವಿಭಾಗಗಳ‌ ಎಂಜಿನಿಯರ್‌ಗಳಿಗೆ ಸೂಚಿಸಿದ್ದಾರೆ.

Advertisement

ತಾ.ಪಂ.ನಲ್ಲಿ ಮೇ 5ರಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ, ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆ ಎಂಜಿನಿಯರ್‌ಗಳ ಸಭೆಯಲ್ಲಿ ಮಾತನಾಡಿದ ಶಾಸಕರು, ಟೆಂಡರ್‌ ಪ್ರಕ್ರಿಯೆ ಮುಗಿದ ಯೋಜನೆಗಳ ಕಾಮಗಾರಿ ತತ್‌ಕ್ಷಣವೇ ಪ್ರಾರಂಭವಾಗಬೇಕು. ಮಳೆಗಾಲ ಆರಂಭವಾದಲ್ಲಿ ಕಾಮಗಾರಿ ನಡೆಸುವುದು ಕಷ್ಟಕರ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಮಗಾರಿಗೆ ವೇಗ ದೊರೆಯಬೇಕೆಂದು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next