Advertisement

Hubli; ಕಾಂಗ್ರೆಸ್ ನ ಸುಳ್ಳುಗಳನ್ನು ನಂಬುವಂತಹ ಮನಸ್ಥಿತಿ ಜನರಲ್ಲಿಲ್ಲ: ಪ್ರಹ್ಲಾದ ಜೋಶಿ

02:10 PM Apr 06, 2024 | |

ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ನ್ಯಾಯ ಯೋಜನೆಗಳಿಗೆ ಮಹತ್ವ ನೀಡುವ ಅವಶ್ಯಕತೆಯಿಲ್ಲ. ಇನ್ನು ನ್ಯಾಯ ಒದಗಿಸುವುದು ಹೇಗೆ ಸಾಧ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

Advertisement

ಶನಿವಾರ ಇಲ್ಲಿಯ ಕಾರವಾರ ರಸ್ತೆ ಅರವಿಂದ ನಗರದ ನೂತನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪಕರ ದಿನಾಚಣೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಕಾಂಗ್ರೆಸ್ ನಾಯಕರು ಮತ ಬ್ಯಾಂಕ್ ಹಾಗೂ ಅಧಿಕಾರಕ್ಕಾಗಿ ಇಂತಹ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಕಳೆದ ಬಾರಿಯೂ ಸಹ ಇಂತಹ ಅನೇಕ ಯೋಜನೆ ಘೋಷಿಸಿದ್ದರು ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ನಾಯಕರು ಇಲ್ಲಿವರೆಗೆ ಸುಳ್ಳು ಹೇಳಿಕೊಂಡೇ ಅಧಿಕಾರ ಮಾಡಿದ್ದಾರೆ. ಇಂತಹ ಸುಳ್ಳುಗಳನ್ನು ಪದೇಪದೆ ನಂಬುವಂತ ಮನಸ್ಥಿತಿ ಜನರಲ್ಲಿಲ್ಲ. ದೇಶದ ಜನರಿಗೆ ಇವರು ಸುಳ್ಳು ಹೇಳುವುದರ ಬಗ್ಗೆ ಗೊತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ವಸತಿ, ಕುಡಿಯುವ ನೀರು ಸೇರಿದಂತೆ ಅನೇಕ ಯೋಜನೆ ನೀಡಿದ್ದಾರೆ. ಕಾಂಗ್ರೆಸ್ ಕಳೆದ ಬಾರಿ ದೇಶದಲ್ಲಿ 52 ಸ್ಥಾನ ಗೆದ್ದಿದ್ದರು. ಈ ಬಾರಿ ಅಷ್ಟು ಸಹ ಬರುವುದಿಲ್ಲ. ರಾಜ್ಯದಲ್ಲಿ ಕೇವಲ ಎರಡು ಸ್ಥಾನ ಗೆಲ್ಲುತ್ತಾರೆ ಎಂಬ ಸಮೀಕ್ಷೆಯಲ್ಲಿ ಬಂದಿದೆ. ನನಗೆ ತಿಳಿದ ಪ್ರಕಾರ ಅಷ್ಟು ಗೆಲ್ಲುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next