Advertisement

ಸುಳ್ಳು ಭರವಸೆಗೆ ಜನ ಮರುಳಾಗಲ್ಲ

07:26 PM Apr 02, 2019 | Lakshmi GovindaRaju |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯ ಅವರ ಸುಳ್ಳು ಭರವಸೆಗಳಿಗೆ ಜನರು ಈ ಬಾರಿ ಬೆಲೆ ಮರುಳಾಗುವುದಿಲ್ಲ ಎಂದು ಕಾಂಗ್ರೆಸ್‌ ಸಮನ್ವಯ ಸಮಿತಿ ಅಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Advertisement

ಪದ್ಮನಾಭ ನಗರದಲ್ಲಿ ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ.

ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಸುಳ್ಳು ಭರವಸೆಗಳಿಗೆ ಕ್ಷೇತ್ರದ ಜನತೆ ಮನ್ನಣೆ ನೀಡುವುದಿಲ್ಲ ಎಂದರು. ಪ್ರಧಾನಿ ಮೋದಿ ಸರ್ಕಾರ ಜನರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿಲ್ಲ.

ಉದ್ಯೋಗ ಸೃಷ್ಟಿ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಇದರಿಂದ ಯುವ ಸಮೂಹ ನಿರಾಶೆಗೊಂಡಿದೆ. ಕಪ್ಪು ಹಣ ತಂದು ದೇಶ ಉದ್ಧಾರ ಮಾಡುತ್ತೇವೆ ಎಂದು ಹೇಳಿದ್ದ ಮೋದಿ ಎಷ್ಟು ಕಪ್ಪು ಹಣ ತಂದಿದ್ದಾರೆ. ಏನೆಲ್ಲಾ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎನ್ನವುದನ್ನು ಜನತೆ ನೋಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next