Advertisement

ರಾಜ್ಯಕ್ಕೂ ಒಳ್ಳೆಯ ಸುದ್ದಿ,ಬಿಜೆಪಿಗೆ ಅಮೃತ ಕಾಲ ಶುರು: ಸಚಿವ ಡಾ.ಕೆ.ಸುಧಾಕರ್

11:54 AM Mar 10, 2022 | Team Udayavani |

ಬೆಂಗಳೂರು :  ನಾಲ್ಕು ರಾಜ್ಯಗಳ ಉಳಿಸಿಕೊಂಡಿದ್ದೇವೆ.ಅಮೃತ ಕಾಲ ಶುರುವಾಗಿದೆ ಎಂದು ಆರೋಗ್ಯ ಮತ್ತು ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಅಮೃತ ಕಾಲ ಪುನರಾವರ್ತನೆ ಆಗಿದೆ .ಡಬಲ್ ಇಂಜಿನ್ ಸರ್ಕಾರ ಬೇಕು ಎಂದು ತೀರ್ಮಾನಿಸಿದ್ದಾರೆ .ಪಂಜಾಬ್ ನಲ್ಲಿ ನಾವು ಗೆಲುವು ನಿರೀಕ್ಷೆ ಮಾಡಿರಲಿಲ್ಲ .ಜಾತಿ ಒಲೈಕೆ ಮಾಡುವ ಕಾಂಗ್ರೆಸ್ ಗೆ ಜನರು ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ನಮ್ಮ ರಾಜ್ಯಕ್ಕೂ ಒಳ್ಳೆಯ ಸುದ್ದಿ ಇದು 2023 ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿಎಂ ಬದಲಾವಣೆ ಅನ್ನೋದೆಲ್ಲಾ ಆಗಲ್ಲ.ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next