Advertisement

ಜನ ಔಷಧಿ ಮಳಿಗೆ ತೆರೆಯಲು ಆಗ್ರಹ

04:13 PM Aug 03, 2019 | Suhan S |

ಕೋಲಾರ: ಮೂರು ತಿಂಗಳಿಂದ ಮುಚ್ಚಿರುವ ಜನ ಔಷಧ ಮಳಿಗೆ ಕೂಡಲೇ ಆರಂಭಿಸುವಂತೆ ರೈತ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್‌ಕುಮಾರ್‌ಗೆ ಮನವಿ ನೀಡಿ ನೀಡಲಾಯಿತು.

Advertisement

ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬಡಜನರಿಗೆ ಔಷಧಿಗಳು ಕಡಿಮೆ ದರದಲ್ಲಿ ಸಿಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿ ತಾಲೂಕಿನ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜಾಗದ ಜೊತೆಗೆ ಎಲ್ಲಾ ಸೌಲಭ್ಯಗಳನ್ನು ನೀಡಿ 200 ಔಷಧಿ ಒಳಗೊಂಡ ಮಳಿಗೆ ತೆರೆಯಲು ಖಾಸಗಿಯವರಿಗೆ ಟೆಂಡರ್‌ ನೀಡಿದೆ. ಆದರೆ, ಟೆಂಡರ್‌ದಾರರು ನೆಪ ಮಾತ್ರಕ್ಕೆ ಮಳಿಗೆ ತೆರೆದು ಅಮಾಯಕರ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಹಣ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.ಟೆಂಡರ್‌ದಾರರು ಮೂರೇ ದಿನಕ್ಕೆ ಮಳಿಗೆ ಮುಚ್ಚಿ ನಾಪತ್ತೆಯಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನಕ್ಕೆ ಶರಣಾಗಿ ಖಾಸಗಿ ಮೆಡಿಸಿನ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ನೊಂದ ರೋಗಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಬಂಗವಾದಿ ನಾಗರಾಜಗೌಡ ಮಾತನಾಡಿ, ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳ ಕೈಗೊಂಬೆಯಾಗಿದೆ. 3 ತಿಂಗಳಿಂದ ಜನ ಔಷಧ ಮಳಿಗೆ ಮುಚ್ಚಿದ್ದರೂ ಟೆಂಡರ್‌ದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಕೇಳಿದ್ರೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಾರೆ. ಕೂಡಲೇ ಕಾಣೆಯಾಗಿರುವ ಜನ ಔಷಧ ಮಳಿಗೆ ಮಾಲಿಕರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಕೂಡಲೇ ಮಳಿಗೆ ಪ್ರಾರಂಭಿಸಬೇಕೆಂದು ಒತ್ತಾಯಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್‌ಕುಮಾರ್‌, ಜನ ಔಷಧ ಮಳಿಗೆ ಮುಚ್ಚಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಸಮಸ್ಯೆ ಬಗೆಹರಿಸಿ ಮಳಿಗೆ ಪ್ರಾರಂಭ ಮಾಡುವ ಜೊತೆಗೆ ಜನರಿಗೆ ಕರ ಪತ್ರದ ಮೂಲಕ ಜಾಗೃತಿ ಮೂಡಿಸುವ ಭರವಸೆ ನೀಡಿದರು. ಮನವಿ ನೀಡುವಾಗ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್‌, ಮಂಗಸಂದ್ರ ನಾಗೇಶ್‌, ತಿಮ್ಮಣ್ಣ, ವೆಂಕಟೇಶಪ್ಪ, ಮೀಸೆ ವೆಂಕಟೇಶಪ್ಪ, ನಲ್ಲಾಂಡಹಳ್ಳಿ ಕೇಶವ, ವೇಣು, ಈಕಂಬಳ್ಳಿ ಮಂಜುನಾಥ್‌, ತೆರ್ನಹಳ್ಳಿ ಆಂಜಿನಪ್ಪ, ವಡ್ಡಹಳ್ಳಿ ಮಂಜುನಾಥ್‌, ಕ್ಯಾಸಂಬಳ್ಳಿ ಪ್ರತಾಪ್‌, ಚಂದ್ರಪ್ಪ, ರಾಮಕೃಷ್ಣಪ್ಪ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next