Advertisement

ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

12:20 PM Oct 16, 2021 | Shwetha M |

ಸಿಂದಗಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಬಿಜೆಪಿಯಿಂದ ಸಾಕಷ್ಟು ಅಭಿವೃದ್ಧಿಯಾಗಿದೆ. ಆದ್ದರಿಂದ ಈ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಮತ ಹಾಕಿ ನನಗೆ ಆಶೀರ್ವದಿಸಿ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮನವಿ ಮಾಡಿಕೊಂಡರು.

Advertisement

ಶುಕ್ರವಾರ ಗಣಿಹಾರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು, ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅಧಿಕಾರದ ಅವಧಿಯಲ್ಲಿ, ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೈಕೊಂಡ ಅಭಿವೃದ್ಧಿ ಕಾರ್ಯ ಹಾಗೂ ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿದ್ದಾರೆ. ಅವರು ನನ್ನನ್ನು ಯಾವತ್ತು ಕೈ ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದರು.

ಶ್ರೀಕಾಂತ ಸೋಮಜಾಳ ಮಾತನಾಡಿ, ರಮೇಶ ಭೂಸನೂರ ತಮ್ಮ 10 ವರ್ಷದ ಅಧಿಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗೆ ಅವರಿಗೆ ಮತ ಹಾಕುವ ಮೂಲಕ ಅವರನ್ನು ಈ ಉಪಚುನಾವಣೆಯಲ್ಲಿ ಮೂರನೇ ಬಾರಿಗೆ ಗೆಲ್ಲಿಸೋಣ ಎಂದರು. ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next