Advertisement

ಕೋವಿಡ್ ಭೀತಿ: ಈ ಐದು ರಾಜ್ಯಗಳಿಂದ ಇನ್ನೂ 15 ದಿನಗಳ ಕಾಲ ರಾಜ್ಯಕ್ಕೆ ಬರುವಂತಿಲ್ಲ

05:48 PM May 28, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕಿತರ ಪ್ರಮಾಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಅನ್ಯರಾಜ್ಯಗಳಿಂದ ಬರುವವರಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಐದು ರಾಜ್ಯಗಳಿಂದ ಜನರು ನಮ್ಮ ರಾಜ್ಯಕ್ಕೆ ಬರುವುದನ್ನು ಇನ್ನೂ 15 ದಿನಗಳ ಕಾಲ ನಿರ್ಭಂಧಿಸಲಾಗಿದೆ

Advertisement

ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ರಾಜಸ್ಥಾನ ರಾಜ್ಯಗಳಿಂದ ಬರುವುದನ್ನು ಇನ್ನೂ 15 ದಿನಗಳ ಕಾಲ ತಡೆಹಿಡಿಯಲಾಗಿದೆ.

ರಾಜ್ಯ ಸಂಪುಟ ಸಭೆಯಲ್ಲಿ ಇಂದು ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆಯ ನಂತರ ಸಚಿವ ಮಾಧುಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿಯನ್ನು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next