Advertisement

ದೆಹಲಿಯಲ್ಲಿ ಲಾಕ್ ಡೌನ್ ಘೋಷಣೆ : ಬಾರ್‍ ಗೆ ಮುಗಿಬಿದ್ದ ಮದ್ಯಪ್ರಿಯರು

01:17 PM Apr 19, 2021 | Team Udayavani |

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾತ್ರಿ ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೆ ಮದ್ಯಪ್ರಿಯರು ಬಾರ್ ಗಳತ್ತ ದೌಡಾಯಿಸಿರುವ ದೃಶ್ಯಗಳು ಕಂಡು ಬಂದಿವೆ.

Advertisement

ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು  ಸಂಪೂರ್ಣ ಲಾಕ್ ಡೌನ್ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ಆತಂಕಕ್ಕೊಳಗಾಗಿರುವ ಕುಡುಕರು ದೆಹಲಿಯ ಖಾನ್ ಮಾರ್ಕೇಟ್‍ನಲ್ಲಿರುವ ಲಿಕ್ಕರ್ ಶಾಪ್ ಎದುರು ಸಾಲುಗಟ್ಟಿ ನಿಂತು ಮದ್ಯ ಖರೀದಿಸಿದ್ದಾರೆ. ಈ ವೇಳೆ ಸಾಮಾಜಿಕ ಅಂತರವನ್ನು ಮರೆತಿದ್ದಾರೆ.

ಇನ್ನು ರಾಜ್ಯ ಸರ್ಕಾರ ಘೋಷಿಸಿರುವ ನೂತನ ನಿಯಮಾವಳಿಗಳ ಪ್ರಕಾರ , ಎಲ್ಲಾ ಖಾಸಗಿ ಕಚೇರಿ, ಕಂಪನಿಗಳು ವರ್ಕ್ ಫ್ರಂ ಹೋಮ್ ಹಾಗೂ ಸರ್ಕಾರಿ ಕಚೇರಿಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಲಭ್ಯವಿರಲಿದೆ. ಲಾಕ್ ಡೌನ್ ನಿಂದ ಕೋವಿಡ್ ತಡೆಯಲು ಸಾಧ್ಯವಿಲ್ಲ, ಆದರೆ ಸಣ್ಣ ಅವಧಿಯ  ಲಾಕ್ ಡೌನ್ ನಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದಾಗಿದೆ ಎಂದು ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.

“ಇಡೀ ದೆಹಲಿ ಒಂದು ಕುಟುಂಬವಿದ್ದಂತೆ, ಈ ಸಂದರ್ಭವನ್ನು ನಾವೆಲ್ಲ ಒಟ್ಟಾಗಿ ಎದುರಿಸಬೇಕಾಗಿದೆ. ಈ ಮೊದಲು ನಾವು ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದೇವು. ಈಗ ಮತ್ತೊಮ್ಮೆ ನಾವು ಎದುರಿಸಿ ಗೆಲ್ಲಬೇಕಾಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಆಹಾರ, ವೈದ್ಯಕೀಯ ಸೇರಿದಂತೆ ತುರ್ತು ಸೇವೆಗಳು ಮುಂದುವರಿಯಲಿದೆ. ಕೇವಲ 50 ಮಂದಿ ಆಹ್ವಾನಿತರೊಂದಿಗೆ ವಿವಾಹ ಕಾರ್ಯಕ್ರಮ ನಡೆಸಬಹುದಾಗಿದೆ. ವಿವರವಾದ ಮಾರ್ಗಸೂಚಿಯನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.

Advertisement

 

 

 

Advertisement

Udayavani is now on Telegram. Click here to join our channel and stay updated with the latest news.

Next