Advertisement
ನಗರದ ಸರ್ವಜ್ಞ ಉದ್ಯಾನ ವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ಜಿಪಂ, ವಕೀಲರ ಸಂಘ, ಆರೋಗ್ಯ ಇಲಾಖೆ, ಜಾಗೃತಿ ಕ್ಯಾನ್ ಸಂಸ್ಥೆ, ಗೋಪ್ಲಾಗ್, ನಗರಸಭೆ ಮತ್ತು ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
Related Articles
Advertisement
ಆತಂಕ ಜೀವನ ನಡೆಸಬೇಕಾಗುತ್ತೆ: ಇಸ್ರೇಲ್ ದೇಶದಲ್ಲಿ 250 ಮೀಟರ್, ನಮ್ಮಲ್ಲಿ 750 ಮೀಟರ್ ಮಳೆ ಬರುತ್ತದೆ. ಹೀಗಿದ್ದೂ ಆ ದೇಶದಲ್ಲಿ ನೀರಿನ ಸಂರಕ್ಷ ಣೆ ಮಾಡಿಕೊಂಡು ಅಭಿವೃದ್ಧಿ ಹೊಂದುತ್ತಿವೆ. ನಾವು ನೀರು ಪೋಲು ಮಾಡುತ್ತೇವೆ. ಸ್ಥಿತಿ ಇದೇ ರೀತಿ ಮುಂದುವರಿದರೆ ಮುಂದೆ ಆತಂಕದಲ್ಲಿ ಜೀವನ ಸಾಗಿಸಬೇಕಾಗುತ್ತದೆ ಎಂದು ಹೇಳಿದರು.
ಪರಿಸರ ಸಂರಕ್ಷಣೆಗೆ ಸಹಕರಿಸಿ: ನೀರಿನ ಸಂರಕ್ಷಣೆಗೆ ಪ್ರತಿ ವರ್ಷ ನರೇಗಾ ಯೋಜನೆಯಲ್ಲಿ ಸಾವಿರ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ. ಪಾಳುಬಿದ್ದ ಗೋಕುಂಟೆ, ಕಲ್ಯಾಣಿಗಳನ್ನು ಸ್ವಚ್ಛ ಮಾಡುವುದು, ಕೋಟಿ ನಾಟಿ ಯೋಜನೆಯಲ್ಲಿ ಗಿಡ ನೆಡುವುದು, ಬೆಟ್ಟ ಗುಡ್ಡ ಪ್ರದೇಶದಲ್ಲಿ ಬೀಜ ಬಿತ್ತನೆ ಮಾಡುವ ಕೆಲಸಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
ತಲೆಗೆ ಒಂದು ಗಿಡ ನೆಡಿ: ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಗುರುರಾಜ್ ಜಿ.ಶಿರೋಳ್ ಮಾತನಾಡಿ, ಭೂಮಿಯಲ್ಲಿ ಶೇ.97 ಪ್ರಮಾಣದ ನೀರು ಇದ್ದರೂ ಶೇ 0.77 ನೀರು ಮಾತ್ರ ಕುಡಿಯಲು ಯೋಗ್ಯವಾಗಿದೆ. ಗಾಳಿ ಮತ್ತು ನೀರನ್ನು ಉತ್ಪಾದಿಸಲು ಪ್ರತಿಯೊಂದು ತಲೆಗೆ ಒಂದು ಗಿಡವನ್ನು ನೆಡಬೇಕಾಗಿದೆ ಎಂದು ಹೇಳಿದರು.
ಜಾಥಾ, ಗಿಡ ವಿತರಣೆ: ಇದಕ್ಕೂ ಮುಂಚೆ ನಗರದ ಟೇಕಲ್ ವೃತ್ತದಲ್ಲಿ ಇರುವ ಕಲ್ಯಾಣಿ ಸ್ವಚ್ಛ ಗೊಳಿಸಿ ನಂತರ ವಿಶ್ವ ಜಲ ದಿನಾಚರಣೆಯ ಅಂಗವಾಗಿ ಪ್ರವಾಸಿ ಮಂದಿರದಿಂದ ಜಾಥಾ ಮೂಲಕ ಮೆರವಣಿಗೆಯಲ್ಲಿ ಸರ್ವಜ್ಞ ಉದ್ಯಾನದಲ್ಲಿ ಗಿಡ ನೀಡಲಾಯಿತು.
ಅಪರ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಜಿಲ್ಲಾ ಪೋಲಿಸ್ ವರಿಷ್ಠಾ ಧಿಕಾರಿ ಡಾ.ರೋಹಿಣಿ ಕಟೋಚ್ ಸೆಪೆಟ್, ನಗರಸಭೆ ಆಯುಕ್ತ ಮಹೇಂದ್ರ ಕುಮಾರ್, ಜಾಗೃತಿ ಸಂಸ್ಥೆಯ ಕೆ.ಧನರಾಜ್, ಮಂಜುಳಾ,ಭೀಮರಾವ್, ಎಸ್ಎನ್ಆರ್ ಪ್ರಸನ್ನ ಮುಂತಾದವರು ಭಾಗವಹಿಸಿದ್ದರು.