Advertisement
ಬಸವೇಶ್ವರ ಸಂಯುಕ್ತ ಪ.ಪೂ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆ, ತಾಲೂಕು ಕಾನೂನು ನೆರವು ಸಮಿತಿ, ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಪ್ರತಿಯೊಬ್ಬರಿಗೂ ಕಾನೂನು ತಿಳಿವಳಿಕೆ ಅಗತ್ಯವಿದ್ದು, ಮನೆಯಿಂದಲೇ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಬೇಕು. ಸದೃಢ ಸಮಾಜ, ದೇಶ ನಿರ್ಮಾಣಕ್ಕೆ ಯುವ ಜನರಿಗೆ ಕಾನೂನು ಅರಿವು ಅಗತ್ಯ ಎಂದ ಅವರು ಕಾನೂನು ಉಲ್ಲಂಘನೆ ಸಲ್ಲದು ಎಂದರು.
Related Articles
ಗೋಕಾಕ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಹೆಚ್ಚಿನ ಸಮಯವನ್ನು ಓದು-ಬರಹದ ಕಡೆಗೆ ಗಮನ ಹರಿಸಿ ಸಾಧನೆ ಮಾಡಬೇಕು ಎಂದು ಗೋಕಾಕ ಉಪವಿಭಾಗದ ಡಿವೈಎಸ್ಪಿ ಪ್ರಭು ಡಿ.ಟಿ. ಹೇಳಿದರು. ನಗರದ ಸರ್ಕಾರಿ ಪ.ಪೂ. ಮಹಾವಿದ್ಯಾಲಯದಲ್ಲಿ ಗೋಕಾಕ ನಗರ ಠಾಣೆ ಹಾಗೂ ಸರ್ಕಾರಿ ಪ.ಪೂ. ಮಹಾವಿದ್ಯಾಲಯದ ಆಶ್ರಯದಲ್ಲಿ ಹಮ್ಮಿಕೊಂಡ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ, ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ವಾಟ್ಸ್ ಆ್ಯಪ್ ಗಳ ಬಳಕೆಯಿಂದ ಯುವ ಜನಾಂಗ ಹಾಳಾಗುತ್ತಿದೆ. ಅಲ್ಲದೇ ಸೈಬರ್ ಕ್ರೈಂ ನಂತಹ ಅಪರಾಧಗಳಲ್ಲಿ ತಮಗೆ ತಿಳಿದೂ ಅಥವಾ ತಿಳಿಯದೇ ಪಾಲ್ಗೊಳ್ಳುತ್ತಿದ್ದಾರೆ. ಇವುಗಳಿಂದ ದೂರ ಉಳಿದು ಉತ್ತಮ ಜೀವನದತ್ತ ಗಮನ ಹರಿಸಬೇಕು ಎಂದರು. ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯ ಎ.ವೈ. ಹಾದಿಮನಿ ಅಧ್ಯಕ್ಷತೆ ವಹಿಸಿದ್ದರು. ನಗರ ಠಾಣೆಯ ಪಿಎಸ್ಐ ಗುರುನಾಥ ಚವ್ಹಾಣ, ಗ್ರಾಮೀಣ ಠಾಣೆಯ ಪಿಎಸ್ಐ ಪ್ರದೀಪ ತಳಗೇರಿ ಇದ್ದರು.
Advertisement