Advertisement

ರಾಜ್ಯದ ಜನತೆ ಬಿಎಸ್ ವೈ ಸಿಎಂ ಆಗೋದನ್ನೇ ಕಾಯುತ್ತಿದ್ದಾರೆ: ಕೆಎಸ್ ಈಶ್ವರಪ್ಪ

12:41 PM Jun 22, 2019 | Team Udayavani |

ಶಿವಮೊಗ್ಗ: ಅಧಿಕಾರಕ್ಕಾಗಿ ಕಾಂಗ್ರೆಸ್ ಶಾಸಕರು, ಸಚಿವರು ಜೆಡಿಎಸ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಮೈತ್ರಿ ಸರ್ಕಾರದ ಬಗ್ಗೆ ರಾಜ್ಯದ ಆರೂವರೆ ಕೋಟಿ ಜನ ಅಸಮಾಧಾನಗೊಂಡಿದ್ದು, ಯಡಿಯೂರಪ್ಪನವರು ಯಾವಾಗ ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನೇ ಕಾಯುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದರು.

Advertisement

ಶುಕ್ರವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪದಾಧಿಕಾರಿಗಳನ್ನು ಯಾಕೆ ವಿಸರ್ಜನೆ ಮಾಡಿದ್ರು. ಅಸಮಾಧಾನ ಇರೋದಕ್ಕೆ ತಾನೇ. ಕಾಂಗ್ರೆಸ್, ಜೆಡಿಎಸ್ ಶಾಸಕರಿಗೂ ಅಸಮಾಧಾನವಿದೆ ಎಂದರು.

ರಾಜ್ಯದಲ್ಲಿ ಇರುವುದು ಮೈತ್ರಿ ಸರ್ಕಾರವಲ್ಲ, ದ್ರೋಹಿಗಳ ಸರ್ಕಾರ ಎಂದು ವಾಗ್ದಾಳಿ ನಡೆಸಿದ ಈಶ್ವರಪ್ಪ, ಸರ್ಕಾರ ರಚನೆಯಾದ ದಿನದಿಂದ ಕುಮಾರಸ್ವಾಮಿ ಕಣ್ಣೀರು ಹಾಕುತ್ತಿದ್ದಾರೆ. ಬೇಷರತ್ ಬೆಂಬಲ ನೀಡುವುದಾಗಿ ಕಾಂಗ್ರೆಸ್ ನವರು ಹೇಳಿದ್ದರು. ಬೇಷರತ್ ಬೆಂಬಲ ಅಂದರೆ ಇದೇನಾ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next