Advertisement

ರಸ್ತೆ ದುರಸ್ತಿಗೆ ಆಗ್ರಹಿಸಿ ಪಟ್ಟಣ ಪಂಚಾಯತ್ ಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

01:29 PM Sep 23, 2020 | sudhir |

ವಿಜಯಪುರ : ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಹಾಳಾದ ರಸ್ತೆ ದುರಸ್ತಿಗೆ ಆಗ್ತಹಿಸಿ ನ್ಯಾಯ ಕ್ರಾಂತಿ ಸಂಘದ ನೇತ್ರತ್ವದಲ್ಲಿ ಸ್ಥಳಿಯರು ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಕೊಲ್ಹಾರ ಪಟ್ಟಣ ಪಂಚಾಯತಿ ಪ್ರವೇಶದ ದ್ವಾರದಲ್ಲಿ ಪ್ರತಿಭಟನೆ ನಡೆಸಿದ ಸ್ರುಥಳೀಯರು, ಪಟ್ಟಣದ ರಸ್ತೆಗಳು ಹಾಳಾಗಿ ಕೆರೆಗಳಂತಾಗಿವೆ. ಪಟ್ಟಣದಲ್ಲಿ ಯಾವುದೇ ಮೂಲಸೌಕರ್ಯ ಇಲ್ಲಾ. ಪಟ್ಟಣ ಪಂಚಾಯತಿ ಆಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಕೂಡಲೇ ರಸ್ತೆಗಳ ದುರಸ್ಥಿ ಕಾರ್ಯ ಆರಂಭಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆ ವೇಳೆ ಪ್ರತಿಭಟಕಾರರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರವಿ ಶಿರಗುಪ್ಪಿ ಜೊತೆಗೆ ವಾಗ್ವಾದ ನಡೆಸಿದರು. ನನ್ನ ಗಮನಕ್ಕೆ ಬಂದ ಸಮಸ್ಯೆ ಬಗೆ ಹರಿಸಿದ್ದೇನೆ. ರಸ್ತೆ ದುರಸ್ಥಿ ಕೆಲಸವೂ ಆರಂಭವಾಗುತ್ತದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ರವಿ ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿದರು. ನಂತರ ತಹಶೀಲ್ದಾರಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ:ಬಾಕಿ ಬಿಲ್ ಪಾವತಿಸಿ ಕೋವಿಡ್ ಸೋಂಕಿತನ ಶವ ಪಡೆಯಲು ಆಸ್ಪತ್ರೆ ತಾಕೀತು! ಸಂಬಂಧಿಕರ ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next