Advertisement

ಅಭಿವೃದ್ಧಿ ಪರ ಸರ್ಕಾರಕ್ಕೆ ಜನ ಬೆಂಬಲ

11:09 PM Dec 09, 2019 | Team Udayavani |

ಬೆಂಗಳೂರು: ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿ ಸ್ಥಿರ ಹಾಗೂ ಸದೃಢ ಸರ್ಕಾರಕ್ಕಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಧನ್ಯವಾದ ಸಲ್ಲಿಸಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರದ ಸಾಧನೆಗಳನ್ನು ಜನರು ಬೆಂಬಲಿಸಿರುವುದು ಉಪಚುನಾವಣೆಯಲ್ಲಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

Advertisement

ಮಹತ್ವದ ಕಾಲಘಟ್ಟದಲ್ಲಿ ಮತದಾರರು ಬಿಜೆಪಿ ಸರ್ಕಾರವನ್ನು ಬಲಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಲಿಷ್ಠ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ರಾಜ್ಯದ ಪ್ರಗತಿಗೆ ಹೆಚ್ಚಿನ ಸಹಕಾರಿಯಾಗಲಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜನಕಲ್ಯಾಣ ಯೋಜನೆಗಳು ರಾಜ್ಯದಲ್ಲಿ ಯಶಸ್ವಿ ಅನುಷ್ಠಾನಗೊಳಿಸಲು ಮತ್ತು ರಾಜ್ಯಕ್ಕೆ ಅಗತ್ಯ ಅನುದಾನ ತರಲು ಸಹಕಾರಿಯಾಗಲಿದೆ. ಬೆಂಗಳೂರಿನಲ್ಲಿ ಮೂಲಸೌಕರ್ಯ ಹೆಚ್ಚಿಸಿ ಭವಿಷ್ಯದ ನಗರವಾಗಿ ರೂಪಿಸುವ ಪ್ರಧಾನಿಯವರ ಆಶಯ ಈಡೇರಲು ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತನ್ನ ಬದ್ಧತೆಗಳನ್ನು ಈಡೇರಿಸುವತ್ತ ಸಾಗಿದೆ. ಇದೀಗ ಉಪಚುನಾವಣೆ ಫ‌ಲಿತಾಂಶದಿಂದ ಮತ್ತಷ್ಟು ವೇಗ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ರಾಜ್ಯ ಸರ್ಕಾರವು ರಾಜ್ಯದ ಜನರ ಹಿತಕ್ಕಾಗಿ ಒಗ್ಗೂಡಿ ಕೆಲಸ ಮಾಡಲಿವೆ. ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಎಲ್ಲ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next