Advertisement

ಜನರ ವಿಶ್ವಾಸ ಉಳಿಸಿಕೊಳ್ಳುವೆ: ಪ್ರತಾಪಗೌಡ

02:47 PM May 29, 2018 | Team Udayavani |

ಮಸ್ಕಿ: ಭಗವಂತ ಒಳ್ಳೆಯವರನ್ನು ಎಂದಿಗೂ ಕೈ ಬಿಡುವುದಿಲ್ಲ ಎಂಬುವುದಕ್ಕೆ ವಿಧಾನಸಭೆ ಚುನಾವಣೆ ಫಲಿತಾಂಶ ಸಾಕ್ಷಿಯಾಗಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

Advertisement

ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಅಲ್ಪ ಮತಗಳ ಅಂತರದಿಂದ ಜಯ ಸಾಧಿಸಿದ್ದರೂ, ಕಾರ್ಯಕರ್ತರು, ಜನರ ಪ್ರೀತಿ-ವಿಶ್ವಾಸದಲ್ಲಿ ಕಡಿಮೆ ಆಗಿಲ್ಲ. ಕೇತ್ರದ ಅಭಿವೃದ್ಧಿಗಾಗಿ ಹಗಲಿರುಳು ದುಡಿದಿದ್ದೇನೆ. ನನಗೆ ನನ್ನ ಕೇತ್ರ ಜನತೆಯ ಮೇಲೆ ನಂಬಿಕೆ ಇತ್ತು ಎಂದರು.

ಮತ ಎಣಿಕೆ ಸಂದರ್ಭದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಾಗ ನಾನು ಗಲಿಬಿಲಿಗೊಳ್ಳಲಿಲ್ಲ. ಕಾರಣ ಕೇತ್ರದ ಜನತೆ ನನ್ನ ಕೈ ಬಿಡುವುದಿಲ್ಲ ಎಂಬ ವಿಶ್ವಾಸ ಇತ್ತು. ಇನ್ನು ಉಳಿದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಿ ಜನರು ನನ್ನ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭಾವುಕರಾಗಿ ಹೇಳಿದರು.

ಕೆಪಿಸಿಸಿ ಸದಸ್ಯ ಅಂದಾನೆಪ್ಪ ಗುಂಡಳ್ಳಿ ಮಾತನಾಡಿ, ಸರಕಾರದಿಂದ ಕೋಟ್ಯಂತರ ರೂ. ಅನುದಾನ ತಂದು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಸರ್ವ ಸಮುದಾಯದ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಿ ಎಂದು ಹಾರೈಸಿದರು. 

ಕೆಪಿಸಿಸಿ ಸದಸ್ಯ ಎಚ್‌.ಬಿ. ಮುರಾರಿ, ಕಾಂಗ್ರೆಸ್‌ ಮುಖಂಡ ಮಹದೇವಪ್ಪಗೌಡ ಪೊಲೀಸ್‌ಪಾಟೀಲ, ಮಸ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವಂತರಾಯ ಕುರಿ, ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಸ್ವಾಮಿ ಹಸಮಕಲ್‌ ಮಾತನಾಡಿದರು. ನಗರ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ಬ್ಯಾಳಿ, ಯುವ ಘಟಕ ಅಧ್ಯಕ್ಷ ವೀರೇಶ ಕಮತರ, ದೊಡ್ಡಪ್ಪ ಕಡಬೂರ, ಬಸನಗೌಡ ಪೊಲೀಸ್‌ ಪಾಟೀಲ, ರವಿಕುಮಾರ ಪೊಲೀಸ್‌ ಪಾಟೀಲ, ಮೌನೇಶ ಮುರಾರಿ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next