Advertisement

ಜನಪರ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ: Jagadish Shettar

09:28 AM Apr 26, 2023 | Team Udayavani |

ಹುಬ್ಬಳ್ಳಿ: ಕಳೆದ 30 ವರ್ಷಗಳಿಂದ ಕ್ಷೇತ್ರದೊಂದಿಗೆ ನಿಕಟ ಸಂಪರ್ಕ ಹೊಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಜನಪರ ಕಾರ್ಯಗಳಿಗೆ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

Advertisement

ವಾರ್ಡ್‌ 39 ಸಾಗರ ಕಾಲೊನಿಯಲ್ಲಿ ಮತಪ್ರಚಾರ ನಡೆಸಿದ ಶೆಟ್ಟರ ಅವರು, ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಕಾಲೋನಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.

ಮುಖ್ಯವಾಗಿ ಯುಜಿಡಿ, ರಸ್ತೆಗಳನ್ನು ಕಾಂಕ್ರೀಟ್‌ ರಸ್ತೆಗಳನ್ನಾಗಿಸಲಾಗಿದೆ. ನೃಪತುಂಗ ಬೆಟ್ಟ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು. ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ನನಗೆ ಅನ್ಯಾಯ ಮಾಡಿರುವ ಬಿಜೆಪಿಗೆ ಮಣ್ಣು ಮುಕ್ಕಿಸಲಿದ್ದಾರೆ. ಆರು ಬಾರಿ ಶಾಸಕನಾಗಿ ನಿಮ್ಮ ಸೇವೆ ಮಾಡಿದ ನನಗೆ ಮತ್ತೊಮ್ಮೆ ಆಶೀರ್ವದಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು
ಹೇಳಿದರು. ಮಾಜಿ ಸಚಿವ ಪಿ.ಸಿ. ಸಿದ್ಧನಗೌಡ್ರ, ಪಾಲಿಕೆ ಮಾಜಿ ಸದಸ್ಯ ಪಿ.ಕೆ.ರಾಯನಗೌಡ್ರ, ಮುಖಂಡರಾದ ಎಂ.ಎಸ್‌.ಪಾಟೀಲ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next