Advertisement
ಈ ಮಧ್ಯೆ ನಗರದಲ್ಲಿ ಸತತ ನಾಲ್ಕನೇ ದಿನವೂ ಸೋಂಕಿತರ ಸಂಖ್ಯೆ 500ರ ಗಡಿದಾಟಿದ್ದು, ಮಂಗಳವಾರ ಹೊಸದಾಗಿ 503 ಮಂದಿಗೆ ಸೋಂಕು ದೃಢಪಟ್ಟಿದೆ. ನಾಲ್ವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 95ಕ್ಕೆ ಏರಿಕೆಯಾಗಿದೆ. 50 ವರ್ಷದ ಪುರುಷ, 45 ವರ್ಷದ ಮಹಿಳೆ, 64 ವರ್ಷದ ವೃದ್ಧ ಹಾಗೂ 63 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಕಂಟೈನ್ಮೆಂಟ್ ವಲಯಗಳ ಸಂಖ್ಯೆ 485 ಆಗಿದೆ.
Related Articles
Advertisement
ಸಚಿವರ ಮನೆ ಬಾಗಿಲಿಗೆ ಸೋಂಕು!: ಕಾಮಾಕ್ಷಿಪಾಳ್ಯದಲ್ಲಿರುವ ಸಚಿವ ಗೋಪಾಲಯ್ಯ ಅವರ ಮನೆ ಬಳಿ 25 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಯುವಕ ತೀವ್ರ ಜ್ವರದಿಂದ ಬಳಲು ತ್ತಿದ್ದು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾ ಗಿದೆ. ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಧಿಕಾರಿಗಳ ಎಡವಟ್ಟು: ನೆಗೆಟಿವ್ ಎಂದು ಊರಿಗೆ ಹೋದ ಮಹಿಳೆಗೆ ಮಂಗಳವಾರ ಪಾಸಿಟಿವ್ ಎಂದು ಪಾಲಿಕೆ ಅಧಿಕಾರಿಗಳು ಕರೆ ಮಾಡಿದ್ದಾರೆ! ರಾಮನಗರ ಮೂಲದ ಮಹಿಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದರು. ಲ್ಯಾಬ್ನಿಂದ ನೆಗೆಟಿವ್ ವರದಿ ಪಡೆದ ಮಹಿಳೆ ಬೆಂಗಳೂರಿನಿಂದ ರಾಮನಗರಕ್ಕೆ ಹೋಗಿ ತನ್ನ ಕೆಲಸಗಳಲ್ಲಿ ನಿರತರಾಗಿದ್ದಾರೆ. ಎರಡು ದಿನಗಳ ನಂತರ ಬಿಬಿಎಂಪಿ ಸಿಬ್ಬಂದಿ ಕರೆ ಮಾಡಿ, ನಿಮಗೆ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ನೀಡಿದ್ದು, ಸೋಂಕಿತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ಅವರೊಂದಿಗೆ ಸಂಪರ್ಕದಲ್ಲಿದ್ದವರೆಲ್ಲಾ ಆತಂಕಕ್ಕೊಳಗಾಗಿದ್ದಾರೆ.
ಬಿಎಂಟಿಸಿ; ಮತ್ತೆ ನಾಲ್ಕು ಪ್ರಕರಣ ದಾಖಲು: ಬಿಎಂಟಿಸಿಯಲ್ಲಿ ಮಂಗಳವಾರ ಮತ್ತೆ ನಾಲ್ವರಿಗೆ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಉತ್ತರಹಳ್ಳಿ ಘಟಕದಲ್ಲಿ ಇಬ್ಬರು ಹಾಗೂ ಕೋರಮಂಗಲದಲ್ಲಿ 1 ಪ್ರಕರಣ ಕಂಡುಬಂದಿದ್ದು, ಇವರು ಈಚೆಗೆ 50 ವರ್ಷ ಮೇಲ್ಪಟ್ಟವರಿಗೆ ನಡೆಸಿದ ರ್ಯಾಂಡಮ್ ಪರೀಕ್ಷೆಗೊಳಪಟ್ಟಿದ್ದರು. ಅದರ ವರದಿ ಬಂದಿದ್ದು, ಸೋಂಕಿರುವುದು ದೃಢಪಟ್ಟಿದೆ.
ಅದೇ ರೀತಿ, ಸುಮನಹಳ್ಳಿ ಘಟಕದಲ್ಲಿ ಒಬ್ಬ ಸಿಬ್ಬಂದಿ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಖುದ್ದಾಗಿ ಪ್ರತ್ಯೇಕವಾಗಿ ಪರೀಕ್ಷೆಗೊಳಗಾಗಿ ದ್ದರು. ಈಗ ವರದಿಯಲ್ಲಿ ಸೋಂಕಿರುವುದು ಕಂಡುಬಂದಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿರುವವರ ಪತ್ತೆ ಮಾಡಲಾಗುತ್ತಿದೆ. ಇದುವರೆಗೆ 32 ಪ್ರಕರಣಗಳಲ್ಲಿ 12 ಜನ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.