Advertisement

ಪೆರ್ಡೂರು ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ನಾಪತ್ತೆ

05:41 PM Apr 28, 2021 | Team Udayavani |

ಕೋಟ: ಖ್ಯಾತ ಯಕ್ಷಗಾನ ಕಲಾವಿದ, ಪೆರ್ಡೂರು ಮೇಳದ ಕಲಾವಿದನಾಗಿ ಸೇವೆ ಸಲ್ಲಿಸುತ್ತಿದ್ದ ಕಡಬಾಳ ಉದಯ ಹೆಗಡೆ ನಾಪತ್ತೆಯಾಗಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಯಂಗಡಿ ಪ್ರಧಾನ ನಗರದಲ್ಲಿ ವಾಸವಾಗಿದ್ದ ಹೆಗಡೆಯವರು ಎ.21 ರಂದು ಸಂಜೆ ಸುಮಾರು 6ಗಂಟೆಗೆ ಮನೆಯಿಂದ ಯಕ್ಷಗಾನ ಪ್ರದರ್ಶನಕ್ಕೆಂದು ತೆರಳಿದವರು ಮತ್ತೆ ವಾಪಸಾಗಿಲ್ಲ ಹಾಗೂ ಮೊಬೈಲ್ ಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿರುವುದಿಲ್ಲ.

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿರುವ ಮನೆಯವರು- ಮತ್ತು ಸಂಬಂಧಿಕರನ್ನು ವಿಚಾರಿಸಿದಾಗಲು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕಡಬಾಳರ ಪತ್ನಿ, ಕಲಾವಿದೆ ಅಶ್ವಿನಿ ಹೆಗಡೆ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಬುಧವಾರ ಸಂಜೆಯ ತನಕ ಯಾವುದೇ ಸುಳಿವು ಲಭ್ಯವಾಗಿಲ್ಲ.

ಇದನ್ನೂ ಓದಿ :ಸೋಂಕಿಗೆ ಸೆಡ್ಡು ಹೊಡೆದ ಅಜ್ಜಿ : ಕೋವಿಡ್ ಗೆದ್ದು ಬಂದ 82ರ ವೃದ್ಧೆ

Advertisement

Udayavani is now on Telegram. Click here to join our channel and stay updated with the latest news.

Next