Advertisement

ಫೆ.4 ರಂದು ಸಿದ್ಧಾಪುರದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 6ನೇ ಶಾಖೆ ಉದ್ಘಾಟನೆ

10:51 AM Feb 03, 2022 | Team Udayavani |

ಹೆಬ್ರಿ : ಗ್ರಾಮೀಣ ಪ್ರದೇಶವಾದ ಪೆರ್ಡೂರಿನಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದ ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ(ನಿ.) ಈಗಾಗಲೇ ಸಹಕಾರಿ ಸೇವೆಯಲ್ಲಿ ಅದ್ವಿತೀಯ ಸಾಧನೆಗೈದು 2017-2018 ರಲ್ಲಿಯೇ ರಾಜ್ಯಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದು ಜನಮನ್ನಣೆ ಗಳಿಸಿದೆ.

Advertisement

ಅತೀ ಕಡಿಮೆ ಅವಧಿಯನ್ನು ಉನ್ನತಮಟ್ಟದ ಬ್ಯಾಂಕಿಂಗ್ ಸೇವೆ ಜತೆ ಪಾರಂಪರಿಕ ಹಾಗೂ ಅತ್ಯಾಧುನಿಕ ಶೈಲಿಯ ಮಣ್ಣಿನ ವಿಭಿನ್ನ ವಸ್ತುಗಳ ಬೃಹತ್ ಮಾರಾಟ ಮಳಿಗೆಯನ್ನು ತೆರೆದು ಜನರ ಆರೋಗ್ಯ ಕಾಳಜಿ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಈಗಾಗಲೇ ಪೆರ್ಡೂರು,ಉಡುಪಿ,ಶಿರ್ವ ಮಂಚಕಲ್, ಕುಂದಾಪುರ ,ಬ್ರಹ್ಮಾವರ ಪ್ರದೇಶಗಳಲ್ಲಿ ತನ್ನ ಶಾಖೆಯನ್ನು ತೆರೆದು ಸೇವಾ ವ್ಯಾಪ್ತಿಯನ್ನು ವಿಸ್ತರಿಸಿದ್ದು ಇದೀಗ ಸಿದ್ಧಾಪುರ ಮುಖ್ಯರಸ್ತೆ ಧರ್ಮದೇವ್ ಪೆಟ್ರೋಲ್ ಬಂಕ್ ಬಳಿ ಇರುವ ಸುಪ್ರೇಕ್ಷಾ ಕಾಂಪ್ಲೆಕ್ಸ್ ನಲ್ಲಿ ತನ್ನ ಬ್ಯಾಂಕಿಗ್ ಕ್ಷೇತ್ರದ 6 ನೇ ಶಾಖೆಯನ್ನು ಫೆ.4 ರಂದು ಬೆಳಿಗ್ಗೆ 11:30 ಕ್ಕೆ ಲೋಕಾರ್ಪಣೆ ಮಾಡಲಿದೆ.

ನೂತನ ಶಾಖೆಯನ್ನು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಬಿ.ಸುಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದು, ಕುಂದಾಪುರ ಮಂಜುನಾಥ ಆಸ್ಪತ್ರೆಯ ಡಾ|ಎಂ.ವಿ.ಕುಲಾಲ್ ದೀಪ ಪ್ರಜ್ವನೆ ಮಾಡಲಿದ್ದಾರೆ.ಭದ್ರತಾ ಕೊಠಡಿಯನ್ನು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಲಿದ್ದು ಸಮಾರಂಭದ ಅಧ್ಯಕ್ಷತೆಯನ್ನು ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್,ಕುಂದಾಪುರ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ.,ಕುಂದಾಪುರ ಬಿದ್ಕಲ್‌ಕಟ್ಟೆ ಕುಲಾಲ ಸಮಾಜ ಸುಧಾರಕ ಸಂಘ(ರಿ) ಇದರ ಅಧ್ಯಕ್ಷ ವಿಶ್ವನಾಥ ಕುಲಾಲ್,ಸಿದ್ಧಾಪುರ ಗ್ರಾ.ಪಂ.ಅಧ್ಯಕ್ಷ ಶೇಖರ ಕುಲಾಲ್,ಕಟ್ಟಡ ಮಾಲೀಕ ರಾಜೀವ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next