Advertisement

ಪೆರ್ಡೂರು ಜಾತ್ರೆ ಹಿನ್ನೆಲೆ: ರಸ್ತೆ ಮಾರ್ಗ ಬದಲಿ: ಜಿಲ್ಲಾಧಿಕಾರಿ

01:45 AM Mar 16, 2024 | Team Udayavani |

ಉಡುಪಿ: ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಮಾ. 16ರಂದು ಸಂಜೆ 4ರಿಂದ ರಾತ್ರಿ 10ರ ವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಸೂಚನೆ ಹೊರಡಿಸಲಾಗಿದೆ.

Advertisement

ರಾ.ಹೆ. 169 (ಎ)ರಲ್ಲಿ ಉಡುಪಿ ಯಿಂದ ಹೆಬ್ರಿ, ಆಗುಂಬೆ ಕಡೆಗೆ ಹೋಗುವ ವಾಹನಗಳಿಗೆ ಹಿರಿಯಡಕ ಜಂಕ್ಷನ್‌ನಲ್ಲಿ ಮಾರ್ಗ ಬದಲಾಯಿಸಿ ಕೋಟ್ನಾಕಟ್ಟೆ- ಹರಿಖಂಡಿಗೆ- ಬೈರಂಪಳ್ಳಿ- ಪೆರ್ಡೂರು ಮೇಲ್ಪೇಟೆ ಮಾರ್ಗವಾಗಿ ಅಥವಾ ಹಿರಿಯಡಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ ಆಗುಂಬೆಗೆ ಸಂಚರಿಸಬೇಕು.

ರಾ.ಹೆ.169(ಎ) ರಲ್ಲಿ ಆಗುಂಬೆ-ಹೆಬ್ರಿಯಿಂದ ಉಡುಪಿ ಕಡೆಗೆ ಬರುವ ವಾಹನಗಳಿಗೆ ಪೆರ್ಡೂರು ಮೇಲ್ಪೇಟೆ- ಬೈರಂಪಳ್ಳಿ ಹರಿಖಂಡಿಗೆ-ಕೋಟ್ನಕಟ್ಟೆ- ಹಿರಿಯಡಕ ಜಂಕ್ಷನ್‌ ಮಾರ್ಗವಾಗಿ ಉಡುಪಿಗೆ ಸಂಚರಿಸಬೇಕು. ರಾ.ಹೆ. 169(ಎ) ರಲ್ಲಿ ಹೆಬ್ರಿಯಿಂದ ಪೆರ್ಡೂರು ಮಾರ್ಗವಾಗಿ ಪೇತ್ರಿ-ಬ್ರಹ್ಮಾವರ ಕಡೆಗೆ ಹೋಗುವ ವಾಹನಗಳು ಪೆರ್ಡೂರು ಮೇಲ್ಪೇಟೆಯ ಬಳಿ ಅಲಂಗಾರು ರಸ್ತೆಯ ಮಾರ್ಗವಾಗಿ ಕರ್ಜೆ, ಪೇತ್ರಿ, ಬ್ರಹ್ಮಾವರಕ್ಕೆ ಸಂಚರಿಸಬೇಕು.

ಪೆರ್ಡೂರು ಕೆಳಪೇಟೆಯಿಂದ ಮೇಲ್ಪೇಟೆಯ ಬಸ್‌ ನಿಲ್ದಾಣದವರೆಗೆ ವಾಹನ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next