Advertisement
ವಿದ್ಯಾಭಾರತಿ ಅಖೀಲ ಭಾರತೀಯ ಶಿಕ್ಷಾ ಸಂಸ್ಥಾನ್, ವಿದ್ಯಾಭಾರತಿ ಕರ್ನಾಟಕ-ಶಾಸ್ತ್ರಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಹುಣಸೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿವಿಧ ವಯೋಮಿತಿಯ ಬಾಲಕರ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದೇಶದ 29 ರಾಜ್ಯಗಳಿಂದ ಒಟ್ಟು 42 ತಂಡಗಳು ಭಾಗವಹಿಸಿದ್ದವು. ಲೀಗ್ನಲ್ಲಿ ಒಟ್ಟು 99 ಪಂದ್ಯಾಟಗಳು ನಡೆಯಿತು.
Related Articles
Advertisement
14ವರ್ಷದೊಳಗಿನ ವಿಭಾಗದಲ್ಲಿ ಮಹಾರಾಷ್ಟ್ರದ ತಂಡ ಪ್ರಥಮ ಸ್ಥಾನ ಪಡೆದಿದೆ. ಅಂತಿಮ ಪಂದ್ಯದಲ್ಲಿ ಕರ್ನಾಟಕದ ಬೆಂಗಳೂರು ತಂಡವನ್ನು 3-0 ಅಂತರದಲ್ಲಿ ಮಣಿಸಿತು. ಕರ್ನಾಟಕ ದ್ವೀತಿಯ, ತಮಿಳುನಾಡು ತತೀಯ ಸ್ಥಾನಕ್ಕೆ ತಪ್ತಿಪಟ್ಟುಕೊಂಡಿತು.
ಭಾನುವಾರ ನಡೆದ ಸಮಾರೋಪದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಸಚಿವ ಎಸ್.ಎ.ರಾಮದಾಸ್, ವಿದ್ಯಾಭಾರತಿ ಖೇಲ್(ಕ್ರೀಡಾ) ಸಂಯೋಜಕರಾದ ಕಿಶೋರ್ ಚವ್ಹಾಣ್, ಸಹ ಸಂಯೋಜಕ ಅಲೋಕ್ ಚೌದರಿ, ಕಷ್ಣಶಂಕರ್ ಶರ್ಮ, ಖೇಲ್ ಅಧಿಕಾರಿ ಆನಂದಶೆಟ್ಟಿ, ದಕ್ಷಿಣ ಮಧ್ಯ ಕ್ಷೇತ್ರಿಯ ಸಂಘಟನಾ ಪ್ರಮುಖ್ ಜಗದೀಶ್, ಜಿಲ್ಲಾ ಪ್ರಮುಖ್ ರಘುವೀರ್, ಶಾಸ್ತ್ರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಸ್.ರಾಧಕಷ್ಣ ಸೇರಿದಂತೆ ಅನೇಕ ಗಣ್ಯರು ವಿಜೇತ ತಂಡಗಳಿಗೆ ಟ್ರೋಫಿ ಮತ್ತು ಬಹುಮಾನ ವಿತರಿಸಿದರು.
ಸ್ಕೂಲ್ ಗೇಮ್ಸ್ ಫೆಡರೇಷನ್ಗೆ ಹುಣಸೂರು ಶಾಸ್ತ್ರಿ ತಂಡ ಆಯ್ಕೆ: 17ವರ್ಷದೊಳಗಿನ ಬಾಲಕರ ಹುಣಸೂರು ಶಾಸ್ತ್ರಿ ವಿದ್ಯಾಸಂಸ್ಥೆಯ ದಕ್ಷಿಣ ಮಧ್ಯಕ್ಷೇತ್ರದ ಕರ್ನಾಟಕ ತಂಡ ಪ್ರಥಮ ಸ್ಥಾನ ಪಡೆದು, ಎಸ್ಜಿಎಫ್ಐ (ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ)ಗೆ ಆಯ್ಕೆಯಾಗಿದ್ದು, ಮುಂಬರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲಿದ್ದಾರೆ.
* ಸಂಪತ್ಕುಮಾರ್