Advertisement

Perinje: ಕಾರು ಆಟೋ ರಿಕ್ಷಾಕ್ಕೆ ಢಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಬಾಲಕ ಸಾವು

10:02 PM May 02, 2023 | Team Udayavani |

ವೇಣೂರು: ವೇಣೂರು-ಮೂಡುಬಿದಿರೆ ರಾಜ್ಯ ಹೆದ್ದಾರಿಯ ಪೆರಿಂಜೆ ಬಂಡಸಾಲೆ ಬಳಿ ಸೋಮವಾರ ನಡೆದ ಕಾರು ಮತ್ತು ಆಟೋರಿಕ್ಷಾ ಅಪಘಾತದಲ್ಲಿ ತೀವ್ರ ತರಹದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕಳಿಯ ನಿವಾಸಿ ಇಸ್ಮಾಯಿಲ್‌ ಎಂಬವರ ಪುತ್ರ ಮಹಮ್ಮದ್‌ ಇಸಾಮ್‌ (11) ಮಂಗಳವಾರ ಮೃತಪಟ್ಟಿದ್ದಾನೆ.

Advertisement

ಆಟೋರಿಕ್ಷಾ ವೇಣೂರು ಕಡೆಗೆ ಬರುತ್ತಿದ್ದ ವೇಳೆ ವೇಣೂರು ಕಡೆಯಿಂದ ಬಂದ ಕಾರು ಢಿಕ್ಕಿಯೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ರಿಕ್ಷಾ ಪಲ್ಟಿಯಾಗಿ ಜಖಂಗೊಂಡಿತ್ತು. ರಿಕ್ಷಾ ಚಾಲಕ ಮತ್ತು ಅದರಲ್ಲಿ ಪ್ರಯಾಣಿಸಿದ್ದ ಮಹಿಳೆ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಮ್ಮದ್‌ ಇಸಾಮ್‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ರಿಕ್ಷಾದಲ್ಲಿದ್ದವರು ಅಜ್ಜಿಮನೆಯಿಂದ ಗೇರುಕಟ್ಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಉಳಿದ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next