Advertisement

SC ಸ್ಪರ್ಧಿಸದಂತೆ ಶಾಶ್ವತ ನಿಷೇಧ: ಇಂದು ಸುಪ್ರೀಂ ಕೋರ್ಟ್‌ ತೀರ್ಪು

10:20 PM Nov 08, 2023 | Team Udayavani |

ನವದೆಹಲಿ: ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ರಾಜಕಾರಣಿಗಳನ್ನು ಚುನಾವಣೆಗೆ ಸ್ಪರ್ಧಿಸದಂತೆ ಶಾಶ್ವತ ನಿಷೇಧ ಕೋರಿ ಸಲ್ಲಿಸಿರುವ ಪಿಐಎಲ್‌ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್‌ ಗುರುವಾರ ಪ್ರಕಟಿಸಲಿದೆ.

Advertisement

“ಒಬ್ಬ ಪೊಲೀಸ್‌ ಕಾನ್ಸ್‌ಟೆಬಲ್‌ ಭ್ರಷ್ಟಾಚಾರದಲ್ಲಿ ತೊಡಗಿದರೆ, ಆತ ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಿರುವಾಗ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ರಾಜಕಾರಣಿಗಳನ್ನು ಸಂಸತ್‌ ಅಥವಾ ಶಾಸಕ ಸ್ಥಾನಗಳ ಚುನಾವಣೆಗೆ ಸ್ಪರ್ಧಿಸದಂತೆ ಶಾಶ್ವತವಾಗಿ ನಿಷೇಧ ಹೇರಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಆಗಸ್ಟ್‌ ವೇಳೆಗೆ 763 ಸಂಸತ್‌ ಸದಸ್ಯರು ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಶೇ.40ರಷ್ಟು ಸಂಸತ್‌ ಸದಸ್ಯರು ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next