Advertisement

ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂ: ಸುಪ್ರೀಂ ನಿರ್ಧಾರ

10:56 PM Sep 12, 2022 | Team Udayavani |

ಬೆಂಗಳೂರು: ರಾಜ್ಯ ಹೈಕೋ ರ್ಟ್‌ ನ ಲ್ಲಿ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ಎಂ.ಜಿ.ಎಸ್‌. ಕಮಲ್‌ ರಾಜೇಂದ್ರ ಬಾದಾಮಿಕರ್‌ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್‌ ಅವರ ಸೇವೆಯನ್ನು ಖಾಯಂ ಮಾಡಲು ಸುಪ್ರೀಂಕೋರ್ಟ್‌ನ ಕೊಲಿಜಿಯಂ ತೀರ್ಮಾನಿಸಿದೆ.

Advertisement

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ| ಯು.ಯು.ಲಲಿತ್‌ ಅಧ್ಯಕ್ಷತೆಯಲ್ಲಿ ಸೆ.7ರಂದು ಜರಗಿದ್ದ ಕೊಲಿಜಿಯಂ ಸಭೆಯಲ್ಲಿ ಈ ಮೂವರ ಸೇವೆಯನ್ನು ಖಾಯಂಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ.

ನ್ಯಾ| ಎಂ.ಜೆ.ಎಸ್‌. ಕಮಲ್‌ 2021ರ ಮಾ.17ರಂದು ಮತ್ತು ನ್ಯಾ| ಗಳಾದ ರಾಜೇಂದ್ರ ಬಾದಾಮಿಕರ್‌ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್‌ ಅವರು 2021ರ ಮಾ.25ರಂದು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next