Advertisement

ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂ: ಸುಪ್ರೀಂ ನಿರ್ಧಾರ

10:56 PM Sep 12, 2022 | Team Udayavani |

ಬೆಂಗಳೂರು: ರಾಜ್ಯ ಹೈಕೋ ರ್ಟ್‌ ನ ಲ್ಲಿ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ಎಂ.ಜಿ.ಎಸ್‌. ಕಮಲ್‌ ರಾಜೇಂದ್ರ ಬಾದಾಮಿಕರ್‌ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್‌ ಅವರ ಸೇವೆಯನ್ನು ಖಾಯಂ ಮಾಡಲು ಸುಪ್ರೀಂಕೋರ್ಟ್‌ನ ಕೊಲಿಜಿಯಂ ತೀರ್ಮಾನಿಸಿದೆ.

Advertisement

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ| ಯು.ಯು.ಲಲಿತ್‌ ಅಧ್ಯಕ್ಷತೆಯಲ್ಲಿ ಸೆ.7ರಂದು ಜರಗಿದ್ದ ಕೊಲಿಜಿಯಂ ಸಭೆಯಲ್ಲಿ ಈ ಮೂವರ ಸೇವೆಯನ್ನು ಖಾಯಂಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ.

ನ್ಯಾ| ಎಂ.ಜೆ.ಎಸ್‌. ಕಮಲ್‌ 2021ರ ಮಾ.17ರಂದು ಮತ್ತು ನ್ಯಾ| ಗಳಾದ ರಾಜೇಂದ್ರ ಬಾದಾಮಿಕರ್‌ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್‌ ಅವರು 2021ರ ಮಾ.25ರಂದು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next