Advertisement

ಯುರೋಪ್ ಸಂಸದರ ಜಮ್ಮು-ಕಾಶ್ಮೀರ ಭೇಟಿ ರದ್ದುಗೊಳಿಸಿ; ಕೇಂದ್ರಕ್ಕೆ ಸ್ವಾಮಿ

09:41 AM Oct 29, 2019 | Team Udayavani |

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ 28 ಸಂಸದರನ್ನೊಳಗೊಂಡ ಯುರೋಪಿಯನ್ ಸಂಸದೀಯ ನಿಯೋಗಕ್ಕೆ ಅವಕಾಶ ಮಾಡಿಕೊಟ್ಟ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ರಾಜ್ಯಸಭಾ ಸದಸ್ಯ, ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

Advertisement

ಅಕ್ಟೋಬರ್ 29ರಂದು ಯುರೋಪಿಯನ್ ಸಂಸದೀಯ ನಿಯೋಗಕ್ಕೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ ಕೊಟ್ಟಿರುವುದು “ದೇಶದ ನೀತಿಯ ಉಲ್ಲಂಘನೆಯಾದಂತಾಗಿದೆ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

ಯುರೋಪಿಯನ್ ಸಂಸದರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೌಲಭ್ಯ ಕಲ್ಪಿಸಿಕೊಟ್ಟಿರುವುದು ನನಗೆ ಅಚ್ಚರಿ ತಂದಿದೆ. ಅವರ ವೈಯಕ್ತಿಕ ಸಾಮರ್ಥ್ಯದ( ಯುರೋಪಿಯನ್ ಅಧಿಕೃತ ನಿಯೋಗವಲ್ಲ) ಮೇಲೆ ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇದು ನಮ್ಮ ರಾಷ್ಟ್ರೀಯ ನೀತಿಯ ಉಲ್ಲಂಘನೆಯಾಗಿದೆ. ಆ ನಿಟ್ಟಿನಲ್ಲಿ ಯುರೋಪಿಯನ್ ಸಂಸದರ ಭೇಟಿಯನ್ನು ಸರ್ಕಾರ ರದ್ದುಪಡಿಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಯುರೋಪಿಯನ್ ನಿಯೋಗ ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, 370ನೇ ವಿಧಿ ನಂತರ ಜಮ್ಮು-ಕಾಶ್ಮೀರದ ಸ್ಥಿತಿಗತಿ ಕುರಿತು ನಿಯೋಗ ಚರ್ಚಿಸಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next