Advertisement

ಜಂತು ಹುಳು ಬಾಧೆ ನಿಯಂತ್ರಣ ಅಗತ್ಯ

05:45 PM Aug 11, 2022 | Team Udayavani |

ದಾವಣಗೆರೆ: ಜಂತುಹುಳು ನಿವಾರಣಾ (ಅಲಬೆಂಡೊಜೋಲ್‌) ಮಾತ್ರೆಗಳ ಸೇವನೆ ಮಕ್ಕಳಲ್ಲಿ ಆರೋಗ್ಯ, ವಿದ್ಯಾಭ್ಯಾಸ ಫಲಿತಾಂಶದಲ್ಲಿ ಏರುಮುಖದ ಬೆಳವಣಿಗೆಗೆ ನೆರವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌ ಹೇಳಿದರು.

Advertisement

ಬುಧವಾರ ನಗರದ ಎಸ್‌.ಒ.ಜಿ ಕಾಲೋನಿಯ ಎ ಬ್ಲಾಕ್‌ನ ಸರ್ಕಾರಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಂತುಹುಳುಗಳು ಮಕ್ಕಳ ಆರೋಗ್ಯವನ್ನು ಬಹಳ ಹಾಳು ಮಾಡುತ್ತವೆ.

ಅದರಿಂದಾಗಿ ಮಕ್ಕಳು ಓದಿನಲ್ಲಿ ಏಕಾಗ್ರತೆ ರಕ್ತಹೀನತೆ, ನೆನಪಿನ ಶಕ್ತಿ, ಶಾಲೆಯಲ್ಲಿ ಕಲಿಕೆಯ ಸಾಮರ್ಥ್ಯ ಕುಗ್ಗಿಸುತ್ತವೆ ಎಂದರು. ಜಂತುಹುಳುಗಳು ಮಕ್ಕಳ ದೇಹದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ.

ಜಂತುಹುಳು ನಿವಾರಣಾ (ಅಲಬೆಂಡೊಜೋಲ್‌) ಮಾತ್ರೆಯನ್ನು ಮಕ್ಕಳು ಸೇವಿಸುವುದರಿಂದ ಆರೋಗ್ಯ, ವಿದ್ಯಾಭ್ಯಾಸ ಫಲಿತಾಂಶದಲ್ಲಿ ಏರುಮುಖದ ಬೆಳವಣಿಗೆಯನ್ನು ನೀಡುತ್ತದೆ. 1ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಸರ್ಕಾರಿ ಮತ್ತು ಅನುದಾನಿತ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುವುದು. ಎಲ್ಲದೂ ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಕೆ.ಎಸ್‌. ಮೀನಾಕ್ಷಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿ ಕಾರಿ ಡಾ| ಪಿ.ಡಿ. ಮುರುಳೀಧರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಡಾ| ನಟರಾಜ್‌, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ. ರೇಣುಕಾರಾಧ್ಯ, ತಾಲೂಕು ಆರೋಗ್ಯಾಧಿಕಾರಿ ಡಾ| ಪಿ. ದೇವರಾಜ್‌, ಮುಖ್ಯೋಪಾಧ್ಯಾಯ ಶಂಕ್ರಪ್ಪ , ನಗರ ಆರೋಗ್ಯ ಕೇಂದ್ರ-3ರ ಆರೋಗ್ಯ ಸಿಬ್ಬಂದಿ, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾಧಿಕಾರಿಗಳು ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next