Advertisement

ಕಾಂಗ್ರೆಸ್ ಪಕ್ಷದ ಪಾದಯಾತ್ರೆ ವಿರುದ್ಧ ಹೈಕೋರ್ಟ್ ಗೆ ಅರ್ಜಿ

03:21 PM Jan 11, 2022 | Team Udayavani |

ಬೆಂಗಳೂರು:” ನಮ್ಮ ನೀರು ನಮ್ಮ ಹಕ್ಕು” ಹೆಸರಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

Advertisement

ಬೆಂಗಳೂರು ನಿವಾಸಿ ಎ.ವಿ. ನಾಗೇಂದ್ರ ಪ್ರಸಾದ್ ಎಂಬುವರು ಈ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸ್ಥಿತಿ ಬಿಗಡಾಯಿಸುತ್ತಿದೆ. ಈ ಮಧ್ಯೆ ಪಾದಯಾತ್ರೆಯಿಂದ ಕೋವಿಡ್ ಹಬ್ಬುವ ಸಾಧ್ಯತೆಯಿದೆ. ನಿರ್ಬಂಧವಿದ್ದರೂ ಕೆಪಿಸಿಸಿ ಪಾದಯಾತ್ರೆ ಮುಂದುವರಿಸಿದೆ. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಪಾದಯಾತ್ರೆ ಮುಂದುವರಿಸದಂತೆ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡುವಂತೆ ಸರ್ಕಾರ, ರಾಮನಗರ ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next