Advertisement

ಹೇಮಂತ್‌ ನಿಂಬಾಳ್ಕರ್‌ ವಿರುದ್ಧದ ಅರ್ಜಿ ಇತ್ಯರ್ಥ

11:11 PM Aug 13, 2019 | Lakshmi GovindaRaj |

ಬೆಂಗಳೂರು: ಸಾವಿರಾರು ಜನರಿಗೆ ಕೋಟ್ಯಂತರ ರೂ.ವಂಚಿಸಿರುವ ಐಎಂಎ ಸಂಸ್ಥೆ ಸಂಸ್ಥಾಪಕ ಮನ್ಸೂರ್‌ ಅಹ್ಮದ್‌ ಖಾನ್‌ ಕಾನೂನಿನಂದ ತಪ್ಪಿಸಿಕೊಂಡು ವಿದೇಶಕ್ಕೆ ಪರಾರಿಯಾದ ವಿಚಾರವಾಗಿ ಸಿಐಡಿ ಐಜಿಪಿ ಆಗಿದ್ದ ಐಪಿಎಸ್‌ ಹಿರಿಯ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ತನಿಖೆಗೊಳಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇತ್ಯರ್ಥಪಡಿಸಿತು.

Advertisement

ಈ ಕುರಿತಂತೆ “ಜನಾಧಿಕಾರ ಸಂಘರ್ಷ ಪರಿಷತ್‌’ನ (ಜೆಎಸ್‌ಪಿ) ಆದರ್ಶ್‌ ಆರ್‌. ಅಯ್ಯರ್‌ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಕೇಳಿರುವ ಕೋರಿಕೆಗೆ ಸಂಬಂಧಿಸಿದಂತೆ ಪ್ರತಿವಾದಿ ಅಧಿಕಾರಿ ವಿರುದ್ಧ ಸೂಕ್ತ ದಾಖಲೆಗಳು ಇದ್ದಲ್ಲಿ ಅದನ್ನು ಎಸ್‌ಐಟಿ ಮುಂದೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತು.

Advertisement

Udayavani is now on Telegram. Click here to join our channel and stay updated with the latest news.

Next