Advertisement

Cauvery: ಸುಪ್ರೀಂಕೋರ್ಟಿಗೆ ಮಂಡ್ಯದ ಇಬ್ಬರು ರೈತರಿಂದ ಅರ್ಜಿ

11:03 PM Sep 21, 2023 | Team Udayavani |

ಮಂಡ್ಯ: ಕಾವೇರಿ ನೀರಿಗಾಗಿ ಕಾನೂನು ಹೋರಾಟ ಮಾಡುತ್ತಿರುವ ಸರಕಾರದ ಜತೆಗೆ ಕೈಜೋಡಿಸಿರುವ ಮಂಡ್ಯ ಜಿಲ್ಲೆಯ ಇಬ್ಬರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಮದ್ದೂರು ತಾಲೂಕಿನ ತರಿಕೇರೆ ಗ್ರಾಮದ ಪ್ರಗತಿಪರ ರೈತ ಕೆ. ಕೆಂಪರಾಜು ಮತ್ತು ಪಾಂಡವಪುರದ ನಿವೃತ್ತ ಯೋಧ ಮತ್ತು ರೈತ ಆರ್‌.ಪಿ.ರವಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದು, ಮೂಲ ದಾವೆಯಲ್ಲಿ ತಮ್ಮನ್ನು ಪಕ್ಷಗಾರರನ್ನಾಗಿಸಿ ರೈತರ ಅಹವಾಲು ಆಲಿಸುವಂತೆ ಅರ್ಜಿಯಲ್ಲಿ ಕೋರಿದ್ದಾರೆ.

ಈಗಾಗಲೇ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ರೈತ ಸಂಘದ ಪರವಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಅದರ ಜತೆಗೆ ಈ ರೈತರು ಸಲ್ಲಿಸಿರುವ ಅರ್ಜಿಗಳೂ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಇದು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲು ಅವಕಾಶವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next