Advertisement

Dakshina Kannada ಮೀನುಗಾರರಿಂದ ಸಚಿವ ವೈದ್ಯರಿಗೆ ಮನವಿ

11:32 PM Nov 22, 2023 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿ ಹಾರಕ್ಕೆ ಆಗ್ರಹಿಸಿ, ಮಂಗಳೂರು ಟ್ರಾಲ್‌ಬೋಟ್‌ ಹಾಗೂ ಪಸೀìನ್‌ ಮೀನುಗಾರರ ಸಂಘದ ನೇತೃತ್ವದಲ್ಲಿ ಮೀನುಗಾರ ಮುಖಂಡರು ಬುಧವಾರ ಬೆಂಗಳೂರಿನಲ್ಲಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

Advertisement

ಪ್ರಮುಖ ಬೇಡಿಕೆಗಳು
– ಮಂಗಳೂರು ಮೀನುಗಾರಿಕೆ ಬಂದರಿನಲ್ಲಿ ಪ್ರಸ್ತುತ 1,500ಕ್ಕೂ ಅಧಿಕ ಮೀನುಗಾರಿಕೆ ಬೋಟುಗಳಿದ್ದು, ಜಾಗದ ಕೊರತೆ ಎದುರಾಗಿದೆ. ಪ್ರತೀ ವರ್ಷ ಹೂಳೆತ್ತುವ ಕಾರ್ಯ ಮಾಡಿಸಬೇಕು. ಮಂಗಳೂರು ಹಳೆ ಬಂದರು ಮತ್ತು ಮೀನುಗಾರಿಕೆ ಬಂದರಿಗೆ ದಶಕದ ಇತಿಹಾಸವಿದ್ದರೂ ಹೂಳೆತ್ತುವ ಸಮಸ್ಯೆ ನಿರಂತರವಾಗಿ ಉದ್ಭವವಾಗುತ್ತಿದೆ. ಇದಕ್ಕಾಗಿ ಅಲೆ ತಡೆಗೋಡೆಗಳ ಅಧ್ಯಯನ ಮಾಡುವಂತೆ ಆಗ್ರಹಿಸಿದೆ.
– ಮಂಗಳೂರು ಮೀನುಗಾರಿಕೆ ಬಂದರಿನಲ್ಲಿ ಪ್ರತೀ ದಿನ 100 ಕೋಟಿ ರೂ.ಗಳಿಗೂ ಅಧಿಕ ವ್ಯವಹಾರ ನಡೆಯುತ್ತಿದೆ. ಆದರೆ ಮೀನುಗಾರರ ರಕ್ಷಣೆ, ಮಹಿಳಾ ಮೀನುಗಾರರ ಸುರಕ್ಷೆ, ಕಳ್ಳತನ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಸಿಸಿ ಕೆಮರಾ ವ್ಯವಸ್ಥೆ, ಪೊಲೀಸ್‌ ಸಿಬಂದಿ ನಿಯೋಜಿಸಲು ಆದೇಶ ನೀಡಬೇಕು.
– ರಖಂ ಹಾಗೂ ಕಮಿಷನ್‌ ಮೀನು ಮಾರಾಟ ಮಂಗಳೂರು ಮೀನುಗಾರಿಕೆ ಬಂದರಿನ ಒಳಭಾಗದಲ್ಲೇ ನಡೆಯುತ್ತಿರುವುದರಿಂದ ಬೇರೆ ರಾಜ್ಯಗಳಿಂದ ಬರುವ ನೂರಾರು ವಾಹನ ಗಳಿಂದ ದಟ್ಟಣೆ ಉಂಟಾಗಿ ದೈನಂದಿನ ಚಟುವಟಿಕೆಗೆ ತೊಡಕಾ ಗುತ್ತಿದೆ. ಇದನ್ನು ಬಂದರಿನಿಂದ ದೂರಕ್ಕೆ ಸ್ಥಳಾಂತರಿಸಬೇಕು.
– 2023ನೇ ಸಾಲಿನಿಂದ ಮೀನುಗಾರಿಕೆ ಇಲಾಖೆಯ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಮಗಾರಿಯನ್ನು ಕರ್ನಾಟಕ ಜಲ ಸಾರಿಗೆ ಮಂಡಳಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಮೀನುಗಾರಿಕೆ ಇಲಾಖೆಯ ಕಾಮಗಾರಿಗಳಿಗೆ ಮಂಡಳಿಯಿಂದ ಹೆಚ್ಚುವರಿಯಾಗಿ ಶೇ. 12ರಷ್ಟು ಶುಲ್ಕ ವಸೂಲಿ ಮಾಡುತ್ತಿದ್ದು, ಇದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ. ಮಂಡಳಿ ವಿಧಿಸುತ್ತಿರುವ ಈ ಶುಲ್ಕಕ್ಕೆ ಕಡಿವಾಣ ಹಾಕಲು ಆದೇಶ ನೀಡಬೇಕು.

ಮೀನುಗಾರರ ಮುಖಂಡರಾದ ಚೇತನ್‌ ಬೆಂಗ್ರೆ, ಮೋಹನ್‌ ಬೆಂಗ್ರೆ, ರಾಜೇಶ್‌ ಉಳ್ಳಾಲ, ಅನಿಲ್‌ ಕುಮಾರ್‌, ಮನೋಹರ್‌ ಬೋಳೂರು, ಹರಿಶ್ಚಂದ್ರ ಮೆಂಡನ್‌, ಜಗದೀಶ್‌ ಬಂಗೇರ, ಶಿವಾನಂದ ಬೋಳಾರ, ಅಶ್ರಫ್ ಅಬೂಬಕ್ಕರ್‌ ಮೊದಲಾದವರು ನಿಯೋಗದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next