Advertisement

ರಾಜೀನಾಮೆ ಅಂಗೀಕಾರಕ್ಕೆ ನಿರ್ದೇಶನ ನೀಡಲು ಅರ್ಜಿ

12:39 AM Jul 12, 2019 | Sriram |

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ವಿಧಾನಸಭಾಧ್ಯಕ್ಷರಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

Advertisement

ವಕೀಲ ನಟರಾಜ್‌ ಶರ್ಮಾ ಈ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಜು.10ರಂದು ಸ್ಪೀಕರ್‌ ಕಚೇರಿಗೆ ಭೇಟಿ ಕೊಟ್ಟು ರಾಜೀನಾಮೆ ಸಲ್ಲಿಸಿರುವ 13 ಶಾಸಕರ ರಾಜೀನಾಮೆಯನ್ನು ವಿಳಂಬ ಮಾಡದೇ ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಬೇಕೆಂದು ವಿಧಾನಸಭಾಧ್ಯಕ್ಷರು ಹಾಗೂ ವಿಧಾನಸಭೆಯ ಕಾರ್ಯದರ್ಶಿಗೆ ಹೈಕೋರ್ಟ್‌ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next