Advertisement

13ರಂದು ಪೆಟ್ರೋಲ್‌ ಬಂಕ್‌ಗಳ ಸ್ಥಗಿತ

10:15 AM Oct 10, 2017 | Team Udayavani |

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮಾರಾಟದ ಮೇಲೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಾರ್ಗದರ್ಶಿ ಸೂತ್ರಗಳ ಬಗ್ಗೆ ಯುನೈಟೆಡ್‌ ಪೆಟ್ರೋಲಿಯಂ ಫ್ರಂಟ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ  ನೀತಿ ಖಂಡಿಸಿ ದೇಶವ್ಯಾಪಿ ಅ.13 ರಂದು ಬಂಕ್‌ಗಳ ಸ್ಥಗಿತಕ್ಕೆ ಮುಂದಾಗಿದೆ. ಅಲ್ಲದೆ ಒಂದು ದಿನದ ಮಟ್ಟಿಗೆ ತೈಲ ಖರೀದಿ ಮತ್ತು ಮಾರಾಟವನ್ನು ಕೂಡ
ಸ್ಥಗಿತಗೊಳಿಸಲು ನಿರ್ಧರಿಸಿದೆ. 

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖೀಲ ಕರ್ನಾಟಕ ಪೆಟ್ರೋಲಿಯಂ ಡೀಲರ್ ಅಸೋಸಿಯೇಷನ್‌ನ ಬೆಂಗಳೂರು ಅಧ್ಯಕ್ಷ ರವೀಂದ್ರನಾಥ್‌, ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತೈಲ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಹೊಸ ನಿಯಮಾವಳಿಗಳಿಂದಾಗಿ ಡೀಲರ್‌ಗಳು ದಿನನಿತ್ಯ ಹಿಂಸೆ ಅನುಭವಿಸುವಂತಾಗಿದೆ. ತೈಲಬೆಲೆಯ ದೈನಂದಿನ ಪರಿಷ್ಕರಣೆಯೂ ಕೂಡ ಬಾಲಿಶತನದಿಂದ ಕೂಡಿದೆ. ಬಂಕ್‌ನಲ್ಲಿ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೂ ಅವಕಾಶ ನೀಡ ಬೇಕೆಂಬ ಆದೇಶ ಹೊರಡಿಸಿ ಒಂದು ವೇಳೆ ಸ್ವಚ್ಛತೆ ಕಾಪಾಡದಿದ್ದರೆ 2 ಲಕ್ಷ ರೂ.ದಂಡ ವಿಧಿಸುವ
ನಿಯಮ ರೂಪಿಸಿದೆ. ಇಂತಹ ದಬ್ಟಾಳಿಕೆ ನೀತಿಯನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

ಒಂದೇರಾಷ್ಟ್ರ ಒಂದೇ ತೆರಿಗೆ ವ್ಯವಸ್ಥೆ ತೈಲೋತ್ಪನ್ನ ಕ್ಷೇತ್ರಕೂ ಜಾರಿಯಾಗಬೇಕು. ಗ್ರಾಹಕರಿಗೂ ಇಂಧನ ಬೆಲೆಯಲ್ಲಿನ ಏರಿಳಿತದ ಲಾಭ ಸಿಗಬೇಕು. ದೇಶದ ಹಲವು ಕ್ಷೇತ್ರಗಳಲ್ಲಿ ಸುರಕು-ಸೇವಾ ತೆರಿಗೆ ಪದ್ಧತಿ ಜಾರಿಯಲ್ಲಿದ್ದು, ಈ ವ್ಯವಸ್ಥೆ ಇದೀಗ ಪೆಟ್ರೋಲಿಯಂ ಉತ್ವನ್ನಗಳಿಗೂ ಅನ್ವಯವಾಗಬೇಕು. ಗ್ರಾಹಕರ ಅನುಕೂಲಕವಾಗುವ ಜಿಎಸ್ಟಿ ವ್ಯವಸ್ಥೆಯನ್ನು ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟ ಕ್ಷೇತ್ರಕ್ಕೂ ಜಾರಿಗೆ ತರಲು ಕೇಂದ್ರ ಸರ್ಕಾರ ಏಕೆ ಹಿಂದೇಟು ಹಾಕುತ್ತಿದೆ ಎಂಬುವುದು ತಮಗೆ ಅರ್ಥವಾಗುತ್ತಿಲ್ಲ ಎಂದರು.
ಪೆಟ್ರೋಲಿಯಂ ಇಲಾಖೆ, ಅಧಿಕಾರಿಗಳ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿದೆ. ಗ್ರಾಹಕರಿಗೆ ಮನೆ ಇಂಧನವನ್ನು ತಲುಪಿಸುವ ಯೋಜನೆ ರೂಪಿಸಿದ್ದು, ಇದು ಸುರಕ್ಷತಾ ದೃಷ್ಠಿಯಿಂದ ಒಳ್ಳೆಯ ಯೋಜನೆ ಅಲ್ಲ. ಈ ಯೋಜನೆ ಕಾರ್ಯಗತವಾಗುವ ಮೊದಲು ಸರ್ಕಾರ ಇದರ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಆದರೆ ಆ ಕೆಲಸವನ್ನು ಸರ್ಕಾರ ಮಾಡಿಲ್ಲ ಎಂದು ಆರೋಪಿಸಿದರು.

ಅಪೂರ್ಣ ಚಂದ್ರ ಕಮಿಟಿಯ ವರದಿ ಜಾರಿ ಸೇರಿದಂತೆ ತಮ್ಮ ಸಂಘಟನೆಯ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮುಂದಾಗದಿದ್ದರೆ ಮತ್ತೆ ಅ.27 ರಿಂದ ಅನಿರ್ದಿಷ್ಟ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next