Advertisement

ಉಡುಪಿ : ಕಟ್ಟಡದಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ

09:03 PM Mar 26, 2021 | Team Udayavani |

ಉಡುಪಿ : ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ಇಂದು (ಶುಕ್ರವಾರ) ನಡೆದಿದೆ.

Advertisement

ಉತ್ತಮ ನಾಯಕ್ (30 ) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಆತ್ರಾಡಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಾಗಿರುವ ಉತ್ತಮ್ ನಾಯಕ ಅವರು ನಾಲ್ಕೈದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಪತ್ನಿ ಮುಂಬೈನಲ್ಲಿ ನೆಲೆಸಿದ್ದರೆ ಉತ್ತಮ ನಾಯಕ್ ಅವರು ಮಠದ ಬೆಟ್ಟುವಿನಲ್ಲಿರುವ ಫ್ಯ್ಲಾಟ್ ನ 3ನೇ ಮಹಡಿಯಲ್ಲಿ ವಾಸವಾಗಿದ್ದರು. ಆದರೆ, ಇಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next