Advertisement

ಟ್ಯಾಂಕರ್ ಪಲ್ಟಿ ಓರ್ವಸಾವು 10ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ

04:07 PM Jun 19, 2018 | Team Udayavani |

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರೊಂದು ಪಲ್ಟಿಯಾಗಿ ಬೆಂಕಿ ಆವರಿಸಿ ಓರ್ವ ಸಾವನ್ನಪ್ಪಿದ್ದು ಸಮೀದಲ್ಲಿದ್ದ 10ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಆವರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಗ್ರಾಮದ ಗಿರಿಯಾಪುರದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. 

Advertisement

ಘಟನೆಯಿಂದ ಹತ್ತಿರದ ಮನೆಗಳಿಗೆ ಬೆಂಕಿ ಆವರಿಸಿದ್ದು ಮನೆಯವರು ಸಿಲುಕಿಕೊಂಡ ಶಂಕೆ ವ್ಯಕ್ತವಾಗಿದೆ. ಬೆಂಕಿ ಸುಮಾರು 100 ಮೀ ದೂರದವರೆಗೂ ವ್ಯಾಪಿಸಿದ್ದು 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 

ಕಡೂರಿನಿಂದ ಹೊಸದುರ್ಗದ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಗಿರಿಯಾಪುರ ಸಾಗುತ್ತಿದ್ದಂತೆ ಪಲ್ಟಿಯಾಗಿದ್ದು ಬೆಂಕಿ ಹೊತ್ತಿಕೊಂಡಿದ್ದು ಬೆಂಕಿಯ ಜ್ವಾಲೆಗೆ ಸಮೀಪದ 10ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next