Advertisement

ಫೋನ್‌ ಕದ್ದಾಲಿಕೆ ಆಗಿರೋದು ನಿಜ: ಅಶ್ವತ್ಥ ನಾರಾಯಣ್‌

10:54 PM Sep 27, 2019 | Lakshmi GovindaRaju |

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಆಗಿರುವುದು ನಿಜ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮೇಲೆ ಅನುಮಾನಗೊಂಡು ಫೋನ್‌ ಕದ್ದಾಲಿಕೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ್‌ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಅವರ ವಾಹನ ಚಾಲಕನ ಫೋನ್‌ ಕದ್ದಾಲಿಕೆ ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿ ದೃಢವಾಗಬೇಕು.

Advertisement

ಸ್ವಾಮೀಜಿಗಳ ಫೋನ್‌ ಕದ್ದಾಲಿಕೆ ಮಾಡಿರುವುದು ಅವರ ಯೋಚನೆಯ ಮಟ್ಟ ತಿಳಿಸುತ್ತದೆ. ಫೋನ್‌ ಕದ್ದಾಲಿಕೆ ಬಗ್ಗೆ ಸಮಾಜಕ್ಕೆ ಗೊತ್ತಾಗಬೇಕು. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಯಾರನ್ನು ನಂಬುತ್ತಿರಲಿಲ್ಲ. ಸಿಎಂ ಹುದ್ದೆಯನ್ನು ಸಂಪೂರ್ಣವಾಗಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next