Advertisement

‘ಕಳ್ಳಗಿವಿ’ತನಿಖೆ ಆರಂಭಿಸಿದ ಸಿಬಿಐ

11:58 AM Sep 02, 2019 | Sriram |

ನವದೆಹಲಿ: ಕರ್ನಾಟಕ ರಾಜಕೀಯ ವಲಯದಲ್ಲಿ ಇತ್ತೀಚೆಗೆ ತಲ್ಲಣ ಸೃಷ್ಟಿಸಿರುವ ಫೋನ್‌ ಕದ್ದಾಲಿಕೆ ಪ್ರಕರಣ ಸಂಬಂಧ ಎಫ್ಐಆರ್‌ ದಾಖಲಿಸಿಕೊಂಡಿರುವ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ.

Advertisement

ರಾಜ್ಯದಲ್ಲಿ ಈ ಹಿಂದಿದ್ದ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಈ ಪ್ರಕರಣದ ತನಿಖೆಯನ್ನು ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಿಬಿಐಗೆ ವಹಿಸಲು ಶಿಫಾರಸು ಮಾಡಿದ್ದರು. ಕೇಂದ್ರ ಸರ್ಕಾರದ ಅಧಿಸೂಚನೆಯಂತೆ, ಸಿಬಿಐ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಶುರು ಮಾಡಿದೆ.

ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಉಭಯ ಪಕ್ಷ ಗಳ ಶಾಸಕರ ಹಾಗೂ ನಾಯಕರ ಫೋನ್‌ಗಳನ್ನು ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಕದ್ದಾಲಿಸಿದ್ದರು ಎಂದು, ಬಂಡಾಯ ಶಾಸಕರಲ್ಲಿ ಒಬ್ಬರಾಗಿದ್ದ ಎಚ್. ವಿಶ್ವನಾಥ್‌ ಅವರು ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next