Advertisement

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

06:21 PM Apr 12, 2024 | Team Udayavani |

ಬಳ್ಳಾರಿ: ನಿರ್ಮಲಾನಂದ ಸ್ವಾಮೀಜಿ ಸೇರಿ ಹಲವರ ಫೋನ್‌ ಕದ್ದಾಲಿಕೆ ಮಾಡಿರುವ ಬಗ್ಗೆ ತನಿಖೆ ನಡೆಸಿದ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

Advertisement

ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೋನ್‌ ಕದ್ದಾಲಿಕೆ ಪ್ರಕರಣ ಬೆಳಕಿಗೆ ಬಂದಾಗ ನಾನೇ ಗೃಹ ಸಚಿವನಾಗಿದ್ದೆ ಈ ಕುರಿತು ನನಗೆ ಮಾಹಿತಿಯಿದೆ.

ನಿರ್ಮಲಾನಂದ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ, ನನ್ನದು ಸೇರಿ ಬೇರೆ ಬೇರೆಯವರ ಫೋನ್‌ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪವಿದೆ. ಇದೀಗ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ತನಿಖೆ ಮಾಡುತ್ತೇವೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ತನಿಖೆ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಈ ಬಗ್ಗೆ ಹೆಚ್ಚು ಮಾತನಾಡುವುದರಲ್ಲಿ ಅರ್ಥವಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿಗೆ ಈಗ ನಿರ್ಮಾಲನಂದ ಸ್ವಾಮಿ ಬಗ್ಗೆ ಪ್ರೀತಿ ಬಂದಿದೆ ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next