Advertisement

Mangalore University ಅಗತ್ಯವುಳ್ಳವರಿಗೆ ಭೌತಿಕ ಅಂಕಪಟ್ಟಿ: ಖಾದರ್‌

01:19 AM Aug 23, 2024 | Team Udayavani |

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳಿಗೆ ಡಿಜಿಲಾಕರ್‌ ಅಂಕಪಟ್ಟಿಯ ಜತೆಗೆ ಅಗತ್ಯವಿರುವ ವರಿಗೆ ಭೌತಿಕ ಅಂಕಪಟ್ಟಿಯನ್ನೂ ನೀಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದ್ದಾರೆ.

Advertisement

ಬೆಂಗಳೂರಿನ ಸ್ಪೀಕರ್‌ ಅವರ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ಉನ್ನತ ಶಿಕ್ಷಣ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಈ ಬಗ್ಗೆ “ಡಿಜಿಲಾಕರ್‌ ಅಂಕಪಟ್ಟಿಗೆ ವಿದ್ಯಾರ್ಥಿಗಳಿಂದ ಅಸಮಾಧಾನ’ ಎಂಬ ಶೀರ್ಷಿ ಕೆಯಲ್ಲಿ ಆ.5ರಂದು “ಉದಯವಾಣಿ’ ವರದಿ ಪ್ರಕಟಿಸಿತ್ತು. ಮುಂಬರುವ ದಿನ ದಲ್ಲಿ ಅಂಕಪಟ್ಟಿ ಬೇಕಾದವರು ವಿವಿಗೆ ಅರ್ಜಿ ಸಲ್ಲಿಸಿ ನಿಗದಿತ ದಿನದ ಒಳಗೆ ಅಂಕಪಟ್ಟಿ ಪಡೆಯಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.

ಮಂಗಳೂರು ವಿವಿ ಪರೀಕ್ಷಾಂಗ (ಕುಲಸಚಿವ) ದೇವೇಂದ್ರಪ್ಪ ಸಭೆಯಲ್ಲಿ ಭಾಗವಹಿಸಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next