Advertisement

ತಲೆನೋವು ಎಂದು ಹೇಳಿದ್ದಕ್ಕೆ 6ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹಲ್ಲೆ!

11:37 AM Jun 02, 2022 | Team Udayavani |

ಚಿಕ್ಕಮಗಳೂರು: ತಲೆನೋವು ಎಂದು ಹೇಳಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿಗೆ ದೈಹಿಕ ಶಿಕ್ಷಕರೊಬ್ಬರು ಮೈಮೇಲೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

Advertisement

ಕೊಪ್ಪ ತಾಲೂಕಿನ ಬಂಡೀಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶ್ರೇಯಸ್ ಹಲ್ಲೆಗೊಳಗಾದ ಬಾಲಕ. ದೈಹಿಕ ಶಿಕ್ಷಕ ನಾಗರಾಜ್ ಎಂಬುವರು ಹಲ್ಲೆ ಮಾಡಿದ್ದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ:ಹುಣಸೆ ಹಣ್ಣಿನ ಬೆಲೆ ದಿಢೀರ್‌ ಕುಸಿತ: ಕೆ.ಜಿ.ಗೆ 40 ರೂ. ಇದ್ದ ಹಣ್ಣಿಗೆ ಈಗ 15 ರೂಪಾಯಿ

ತರಗತಿಯಲ್ಲಿ ಸರಿಯಾಗಿ ಬರೆಯಬೇಕು ಎಂದು ಶ್ರೇಯಸ್ ತಲೆಗೆ ನಾಗರಾಜ್ ಹೊಡೆದಿದ್ದಾರೆ. ಬಾಲಕ ತಲೆನೋವು ಎಂದು ಹೇಳಿದ್ದಕ್ಕೆ ಕಾಲಿಗೆ-ಬೆನ್ನಿಗೆ ಹೊಡೆದಿದ್ದಾರೆ. ಶಿಕ್ಷಕನ ಏಟಿನ ಪರಿಣಾಮ ಬಾಲಕನ ಬೆನ್ನಿನ ಮೇಲೆ ಬಾಸುಂಡೆಗಳು ಬಿದ್ದಿವೆ.

ಶಿಕ್ಷಕನ ವಿರುದ್ಧ ಸ್ಥಳೀಯರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಅವರನ್ನು ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next