Advertisement

Heavy Rain ಹೊಳೆ ಮಧ್ಯೆ ಸಿಲುಕಿಕೊಂಡ ಪಿಕಪ್‌; ಕಾರ್ಯಾಚರಣೆ

01:01 AM Jun 01, 2024 | Team Udayavani |

ಸುಳ್ಯ: ಗುರುವಾರ ಅಪರಾಹ್ನ ಸುಬ್ರಹ್ಮಣ್ಯ, ಕೊಲ್ಲಮೊಗ್ರು ಪರಿಸರದಲ್ಲಿ ಧಾರಾಕಾರ ಮಳೆಯಾಗಿ ದ್ದು, ಈ ವೇಳೆ ಹೊಳೆಯಲ್ಲಿ ದಿಢೀರ್‌ ನೆರೆ ನೀರು ಹರಿದು ಬಂದು ಪಿಕಪ್‌ ವಾಹನ ವೊಂದು ನೆರೆ ನೀರಿನಲ್ಲಿ ಅಪಾಯಕ್ಕೆ ಸಿಲುಕಿದ ಘಟನೆ ಸಂಭವಿಸಿದೆ.

Advertisement

ಕೊಲ್ಲಮೊಗ್ರು ಗ್ರಾಮದ ಪನ್ನೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಕೋತ್ನಡ್ಕದ ರಾಮಕೃಷ್ಣ ಅವರ ಮನೆಯಿಂದ ಮಹೇಶ್‌ ಪಿಕಪ್‌ನಲ್ಲಿ ತೆಂಗಿನಕಾಯಿ ಹೇರಿಕೊಂಡು ಹಿಂದಿರುಗುವ ವೇಳೆ ಹೊಳೆ ದಾಟುವ ಸಂದರ್ಭ ದಿಢೀರ್‌ ನೆರೆ ನೀರು ಹರಿದು ಬಂದು ಹೊಳೆ ಮಧ್ಯದಲ್ಲಿ ಪಿಕಪ್‌ ವಾಹನ ಸಿಲುಕಿಕೊಂಡಿತು. ಈ ಘಟನೆಯಿಂದ ಪಿಕಪ್‌ನಲ್ಲಿದ್ದ ನೂರಾರು ತೆಂಗಿನಕಾಯಿಗಳು ನೀರು ಪಾಲಾಗಿವೆ ಎಂದು ತಿಳಿದುಬಂದಿದೆ.

ಹೊಳೆ ನಡುವೆ ಸಿಲುಕಿಕೊಂಡು, ಕೊಚ್ಚಿಕೊಂಡು ಹೋಗುವ ಭೀತಿಯಲ್ಲಿದ್ದ ಪಿಕಪ್‌ ವಾಹನಕ್ಕೆ ಹಗ್ಗ ಕಟ್ಟಿ, ನದಿ ದಡದಲ್ಲಿದ್ದವರು ಸೇರಿ ಎಳೆಯುವ ಕಾರ್ಯಾಚರಣೆ ನಡೆಸಿ ಪಿಕಪ್‌ ವಾಹನವನ್ನು ಹೊಳೆಯಿಂದ ಹೊರ ತಂದಿದ್ದಾರೆ.

ಧಾರಾಕಾರ ಮಳೆ: ಅಪಾಯಕ್ಕೆ ಸಿಲುಕಿದ ಕಟ್ಟಡಗಳು
ಸುಬ್ರಹ್ಮಣ್ಯ: ಗುರುವಾರ ಸಂಜೆ ಸುರಿದ ಮಳೆಗೆ ಯೇನೆ ಕಲ್ಲು ಪೇಟೆಯ ಬಳಿಯ ಹೊಳೆಯಲ್ಲಿ ಮಳೆ ನೀರಿನ ಹರಿವಿಗೆ ಮಣ್ಣು ಕೊಚ್ಚಿ ಹೋಗಿದ್ದು, ಕೆಲವು ಕಟ್ಟಡಗಳು ಅಪಾಯದಲ್ಲಿವೆ.

ಯೇನೆಕಲ್ಲು ಬಸ್‌ ನಿಲ್ದಾಣದ ಬಳಿಯಿಂದ ಇಸ್ಮಾಯಿಲ್‌ ಅವರ ಮನೆಯ ತನಕ, ಮಹಮ್ಮದ್‌ ಅವರ ಕಟ್ಟಡ, ನಾಳ ಕುಶಾಲಪ್ಪ ಗೌಡರ ಕಟ್ಟಡ, ಗಂಗಾಧರ ಪೈಲಾಜೆಯವರ ಕಟ್ಟಡ, ಇಸ್ಮಾಯಿಲ್‌ ಅವರ ಮನೆಯ ಹಿಂಭಾಗದ ತನಕ ಮಣ್ಣು ನೀರಿನಲ್ಲಿ ಕೊಚ್ಚಿಹೋಗಿ ಕಟ್ಟಡಗಳು ಅಪಾಯದ ಸ್ಥಿತಿಯ ಲ್ಲಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

ಸರಕಾರಿ ಪ್ರೌಢಶಾಲೆಯ ಗೇಟ್‌ ಬಳಿ ಹರಿಯುವ ಸಣ್ಣ ತೋಡಿನಲ್ಲಿ ನೀರಿನ ಮಟ್ಟ ಏರಿಕೆಯಾಗಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕೋಟಿಗೌಡನ ಮನೆ, ಮಾದನಮನೆ, ಕಡಿಂಬಿಲ ಬೈಲಿನ ಭಾಗಗಳಲ್ಲಿ ನೀರು ತೊಟಕ್ಕೆ ನುಗ್ಗಿ ಜಲಾವೃತಗೊಂಡಿತ್ತು. ಲಿಂಗಪ್ಪ ಗೌಡ ಮಲ್ಲಾರ ಅವರ ಮನೆಯ ಬಳಿಯ ಮೋರಿ ನೀರುಪಾಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next