Advertisement

ಪ್ರಕರಣ ಹಂಚಲು ಸಿಜೆಐ ಅರ್ಹರೇ?

10:45 AM Apr 07, 2018 | Team Udayavani |

ಹೊಸದಿಲ್ಲಿ: ಪ್ರಕರಣಗಳನ್ನು ನ್ಯಾಯಪೀಠಗಳಿಗೆ ಹಂಚುವ ಮುಖ್ಯ ನ್ಯಾಯಮೂರ್ತಿಯ ಆಡಳಿತಾತ್ಮಕ ಅಧಿಕಾರದ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲ ಶಾಂತಿ ಭೂಷಣ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಸಿಜೆಐ ದೀಪಕ್‌ ಮಿಶ್ರಾ ಪ್ರತಿನಿಧಿಸುವ ಪೀಠಕ್ಕೆ ವಿಚಾರಣೆಗೆ ನಿಗದಿಗೊಳಿಸಬಾರದು ಎಂದು ಕೋರಿ ಸುಪ್ರೀಂಕೋರ್ಟ್‌ನ ಪ್ರಧಾನ ಕಾರ್ಯದರ್ಶಿಗೆ ಅವರು ಪತ್ರ ಬರೆದಿದ್ದಾರೆ.

Advertisement

ಮೂವರು ಹಿರಿಯ ನ್ಯಾಯಮೂರ್ತಿಗಳಿರುವ ಪೀಠದಲ್ಲಿ ಇದನ್ನು ಮಂಡಿಸಬೇಕು ಮತ್ತು ಅವರು ಈ ಅರ್ಜಿಯ ವಿಚಾರಣೆಯನ್ನು ಯಾವ ಪೀಠ ನಡೆಸಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ಕೋರಿದ್ದಾರೆ. ದೂರಿನಲ್ಲಿ ಸಿಜೆಐ ಕೂಡ ಪ್ರತಿಕ್ರಿಯೆದಾರರು ಎಂದು ಉಲ್ಲೇಖೀಸಲಾಗಿದೆ. ಈ ಮಧ್ಯೆ ಸಿಜೆಐ ಮಿಶ್ರಾ ವಿರುದ್ಧದ ಮಹಾಭಿಯೋಗ ಪ್ರಸ್ತಾವ‌ ಕೈಬಿಡುವುದಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆ. ಈಗಾಗಲೇ ವರದಿಯಾದಂತೆ, ಪ್ರಸ್ತಾವ‌ವನ್ನು ಕಾಂಗ್ರೆಸ್‌ ಕೈಬಿಟ್ಟಿಲ್ಲ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next